ಎಸ್ ಸಿ ಪಿ ಟಿ ಎಸ್ ಪಿಗೆ ಬಿಡುಗಡೆ ಮಾಡಿದ ಅನುದಾನವನ್ನು ಗೃಹ ಲಕ್ಷ್ಮೀ ಯೋಜನೆಗೆ ಬಳಸಿಲ್ಲ: ಹೆಚ್ ಸಿ ಮಹದೇವಪ್ಪ, ಸಮಾಜಕಲ್ಯಾಣ ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Jul 31, 2023 | 5:22 PM

ಎಸ್ ಸಿ ಪಿ ಟಿ ಎಸ್ ಪಿ ಗೆ ಶೇಕಡ 24.10 ರಷ್ಟು ಅನುದಾನ ನೀಡಲಾಗಿದೆ, ಅದಕ್ಕಿಂತ ಹೆಚ್ಚು ಹಣ ಬಿಡುಗಡೆಯಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಸಚಿವರು ಹೇಳಿದರು.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಸ್ಕೀಮ್ ಗಳಿಗೆ ಬೇರೆ ಯೋಜನೆ ಅಥವಾ ಇಲಾಖೆಗಳಿಗೆ ಮೀಸಲಾಗಿರಿಸಿರುವ ಹಣ ಬಳಸಲಾಗಿತ್ತಿದೆಯೇ? ವಿರೋಧ ಪಕ್ಷಗಳ ನಾಯಕರು ಅಂಥದೊಂದು ಅರೋಪವನ್ನು ಕೆಲದಿನಗಳಿಂದ ಮಾಡುತ್ತಿದ್ದಾರೆ. ಇಂದು ವಿಧಾನಸೌಧಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಎಸ್ ಸಿ ಪಿ ಟಿ ಎಸ್ ಪಿ (ಸ್ಪೆಷಲ್ ಕಂಪೋನೆಂಟ್ ಪ್ಲ್ಯಾನ್- ಟ್ರೈಬಲ್ ಸಬ್ ಪ್ಲ್ಯಾನ್) (SCP-TSP) ಸಭೆಯ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹಾದೇವಪ್ಪ (HC Mahadevappa) ಅವರಿಗೆ ಪತ್ರಕರ್ತರು ಎಸ್ ಸಿ ಪಿ ಟಿ ಎಸ್ ಪಿ ಗೆ ಮೀಸಲಿಟ್ಟ ಹಣವನ್ನು ಗೃಹಲಕ್ಷ್ಮೀ ಬಳಸಲಾಗುತ್ತಿದೆಯೇ ಅಂತ ಪ್ರಶ್ನೆ ಕೇಳಿದರು. ಅವರು ಉತ್ತರ ನೀಡುತ್ತಿದ್ದಾಗ, ಸರ್ ನೀವು ಸುಳ್ಳು ಹೇಳುತ್ತಿದ್ದೀರಿ ಅಂತ ನೇರವಾಗಿ ಹೇಳಿದರು. ಪತ್ರಕರ್ತರ ದಾಳಿಯಿಂದ ವಿಚಲಿತರಾಗದ ಮಹದೇವಪ್ಪ, ಇಲ್ಲ, ಹಾಗೇನೂ ಇಲ್ಲ, ಒಂದು ಇಲಾಖೆಗೆ ಬಿಡುಗಡೆ ಮಾಡಿದ ಅನುದಾನ ಬೇರೆ ಯೋಜನೆಗೆ ಬಳಸಲು ಬರೋದಿಲ್ಲ, ಹಾಗಾಗೋದಿಕ್ಕೆ ಸಾಧ್ಯವೇ ಇಲ್ಲ, ನೀವು ಮಾಡುತ್ತಿರುವ ಆರೋಪ ಆಧಾರರಹಿತವಾದದ್ದು. ಎಸ್ ಸಿ ಪಿ ಟಿ ಎಸ್ ಪಿ ಗೆ ಶೇಕಡ 24.10 ರಷ್ಟು ಅನುದಾನ ನೀಡಲಾಗಿದೆ, ಅದಕ್ಕಿಂತ ಹೆಚ್ಚು ಹಣ ಬಿಡುಗಡೆಯಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.