ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು, ಎದುರಾದ ಆತಂಕವೇನು?

Edited By:

Updated on: May 14, 2026 | 7:04 PM

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಂದೂಡಿಕೆಗೆ ಸಕಾರಣಗಳೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಇದರ ನಡುವೆ ಇದೀಗ ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಜಿಬಿಎ ಚುನಾವಣೆಗೆ ಎಸ್​ಐಆರ್​ ಅಡ್ಡಿಯಾಗುವ ಆತಂಕ ಎದುರಾಗಿದೆ.

ಬೆಂಗಳೂರು, (ಮೇ 14): ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಮತ್ತಷ್ಟು ವಿಳಂಬ ಆಗುವ ಸಾಧ್ಯತೆ ದಟ್ಟವಾಗಿದೆ. ಚುನಾವಣೆ ಮುಂದೂಡಿಕೆಗೆ ಸಕಾರಣಗಳೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಇದರ ನಡುವೆ ಇದೀಗ ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಗೆ ದಿನಾಂಕ ನಿಗದಿಯಾಗಿದೆ. ಹೀಗಾಗಿ ಜಿಬಿಎ ಚುನಾವಣೆಗೆ ಎಸ್​ಐಆರ್​ ಅಡ್ಡಿಯಾಗುವ ಆತಂಕ ಎದುರಾಗಿದೆ.

SIR ಪ್ರಕ್ರಿಯೆಗೆ ಹೆಚ್ಚಿನ ಆಡಳಿತ ಸಿಬ್ಬಂದಿ, ಅಧಿಕಾರಿಗಳ ಬಳಕೆ ಮಾಡಲಾಗುತ್ತಿದೆ. ಇದರಿಂದ ಜಿಬಿಎ ಚುನಾವಣೆಗೆ ಸಿಬ್ಬಂದಿ ವರ್ಗದ ಕೊರತೆ ಎದುರಾಗುವ ಸಾಧ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಜಿಬಿಎ ಚುನಾವಣೆ ಮುಂದೂಡಿಕೆಗೆ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದಿಂದಲೇ ಕೋರ್ಟ್​ಗೆ ಮನವರಿಕೆ ಮಾಡಿಕೊಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: Karnataka SIR: ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ

Published on: May 14, 2026 05:52 PM
Loading...
Unable to load recommendations.
Follow Us