ಮದುಮಗ ಇದ್ದ ಜಾಗ್ವಾರ್ ಕಾರಿನಲ್ಲಿ ಬೆಂಕಿ, ಮುಂದೇನಾಯ್ತು? ವಿಡಿಯೋ ನೋಡಿ

ಮಹೇಶ್ ಇ, ಭೂಮನಹಳ್ಳಿ Edited By:

Updated on: Nov 09, 2023 | 2:31 PM

ಕೋಟ್ಯಾಂತರ ರೂಪಾಯಿ ಮೌಲ್ಯದ ಐಷಾರಾಮಿ ಜಾಗ್ವಾರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯ ಕುಣಿಗಲ್​ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ.

ತುಮಕೂರು, (ನವೆಂಬರ್ 09): ಕೋಟ್ಯಾಂತರ ರೂಪಾಯಿ ಮೌಲ್ಯದ ಐಷಾರಾಮಿ ಜಾಗ್ವಾರ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯ ಕುಣಿಗಲ್​ನ ನಕ್ಷತ್ರ ಪ್ಯಾಲೇಸ್ ಕಲ್ಯಾಣ ಮಂಟಪದ ಬಳಿ ಈ ಘಟನೆ ನಡೆದಿದೆ. ಮದುವೆಗೆಂದು ಬಂದಿದ್ದ ವರನ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮದುಮಗ ಇದೇ ಕಾರಿನಲ್ಲಿ ಬಂದು ಕಲ್ಯಾಣ ಪಂಟಪದೊಳಗೆ ಹೋಗಿದ್ದಾನೆ. ಆಗ ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...