ಉಚಿತ ಗೃಹಜ್ಯೋತಿ ವಿದ್ಯುತ್​ ಐಡಿಯಾ ಕೊಟ್ಟಿದ್ದು ಯಾರು ಗೊತ್ತಾ? ವಿದ್ಯುತ್​ ಸಚಿವ ಕೆಜೆ ಜಾರ್ಜ್ ಹೇಳಿದ ಸತ್ಯ ಏನು?

ಸಾಧು ಶ್ರೀನಾಥ್​

Updated on: Sep 16, 2023 | 1:47 PM

ರಾಜ್ಯದಲ್ಲಿ ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬರಲೇಬೇಕು ಎಂದು ಸಾಲು ಸಾಲು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಭರಪೂರವಾಗಿ ಚುನಾವಣೆ ಮುಂಚೆ ಘೋಷಿಸಿತ್ತು. ಅದರಂತೆ ಭರ್ಜರಿಯಾಗಿ ಅಧಿಕಾರಕ್ಕೆ ಬಂದಿತ್ತು. ಆಗ ಸರ್ಕಾರದ ಚುಕ್ಕಾಣಿ ಭಾರೀ ಹಗ್ಗಜಗ್ಗಾಟದ ಬಳಿಕ ಕೊನೆಗೆ ಸಿದ್ದರಾಮಯ್ಯ ಅವರ ಪಾಲಾಗಿತ್ತು. ಆದರೆ ಅದಕ್ಕೆ ಅವರು ಬಹುಮುಖ್ಯ ಕೊಡುಗೆಯೊಂದನ್ನು ನೀಡಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್​​ ಪಕ್ಷ ಅಧಿಕಾರಕ್ಕೆ ಬರಲೇಬೇಕು ಎಂದು ಸಾಲು ಸಾಲು ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಭರಪೂರವಾಗಿ ಚುನಾವಣೆ ಮುಂಚೆ ಘೋಷಿಸಿತ್ತು. ಅದರಂತೆ ಭರ್ಜರಿಯಾಗಿ ಅಧಿಕಾರಕ್ಕೆ ಬಂದಿತ್ತು. ಆಗ ಸರ್ಕಾರದ ಚುಕ್ಕಾಣಿ ಭಾರೀ ಹಗ್ಗಜಗ್ಗಾಟದ ಬಳಿಕ ಕೊನೆಗೆ ಸಿದ್ದರಾಮಯ್ಯ ಅವರ ಪಾಲಾಗಿತ್ತು. ಆದರೆ ಅದಕ್ಕೆ ಅವರು ಬಹುಮುಖ್ಯ ಕೊಡುಗೆಯೊಂದನ್ನು ನೀಡಿದ್ದರು. ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಎಂಬ 200 ಯೂನಿಟ್ ಉಚಿತ ವಿದ್ಯುತ್​ ಐಡಿಯಾ ಕೊಟ್ಟಿದ್ದೇ ಸಿದ್ದರಾಮಯ್ಯ ಅವರಂತೆ.

ಸಿದ್ದರಾಮಯ್ಯ ಅವರು ಕೊಟ್ಟ ಸಲಹೆಯಂತೆ ಯಾವುದೇ ಕುಟುಂಬದ ವಾರ್ಷಿಕ ಬಳಕೆಯ ಆಧಾರದ ಮೇಲೆ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ 200 ಯೂನಿಟ್ ಉಚಿತ ವಿದ್ಯುತ್​ ಕೊಡಲಾಗುತ್ತಿದೆ. ಈ ಸಂಗತಿಯನ್ನು ನಿನ್ನೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಟಿವಿ9 ಶೃಂಗಸಭೆಯಲ್ಲಿ ವಿದ್ಯುತ್​ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ​ ಸಚಿವ ಕೆಜೆ ಜಾರ್ಜ್ ಹೇಳಿದ್ದೇನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 16, 2023 01:44 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು