ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಜಿ.ಎಸ್ ಪಾಟೀಲ್ ಅವಿರೋಧ ಆಯ್ಕೆ

Updated on: Aug 14, 2026 | 12:40 PM

ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದು, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಅನುಮೋದಿಸಿದ್ದಾರೆ. ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ನಂತರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮತ್ತು ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಜಿ.ಎಸ್. ಪಾಟೀಲ್ ಅವರನ್ನು ಸಭಾಧ್ಯಕ್ಷರ ಪೀಠಕ್ಕೆ ಕರೆತಂದರು. ಈ ಸಂದರ್ಭದಲ್ಲಿ ಸದನದಲ್ಲಿ ಹಾಜರಿದ್ದ ಸದಸ್ಯರು ನೂತನ ಸಭಾಧ್ಯಕ್ಷರಿಗೆ ಶುಭ ಕೋರಿದರು.

ಬೆಂಗಳೂರು, ಆಗಸ್ಟ್ 14: ಕರ್ನಾಟಕ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದು, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಅನುಮೋದಿಸಿದ್ದಾರೆ.

ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯ ನಂತರ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮತ್ತು ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಜಿ.ಎಸ್. ಪಾಟೀಲ್ ಅವರನ್ನು ಸಭಾಧ್ಯಕ್ಷರ ಪೀಠಕ್ಕೆ ಕರೆತಂದರು. ಈ ಸಂದರ್ಭದಲ್ಲಿ ಸದನದಲ್ಲಿ ಹಾಜರಿದ್ದ ಸದಸ್ಯರು ನೂತನ ಸಭಾಧ್ಯಕ್ಷರಿಗೆ ಶುಭ ಕೋರಿದರು.

ಜಿ.ಎಸ್. ಪಾಟೀಲ್ ಅವರು ರೋಣ ಕ್ಷೇತ್ರದ ಶಾಸಕರಾಗಿದ್ದು, ಕೃಷಿ ಹಿನ್ನೆಲೆಯ ಕುಟುಂಬದಿಂದ ಬಂದವರು. ರಾಜಕೀಯದಲ್ಲಿ ಸುದೀರ್ಘ ಅನುಭವ ಹೊಂದಿದ್ದು, ಈ ಹಿಂದೆ ಎಂಟು ಬಾರಿ ಚುನಾವಣೆಗೆ ಸ್ಪರ್ಧಿಸಿ ನಾಲ್ಕು ಬಾರಿ ಗೆಲುವು ಸಾಧಿಸಿದ್ದಾರೆ. ಆಡಳಿತ ಪಕ್ಷದಲ್ಲಿ ಮತ್ತು ವಿರೋಧ ಪಕ್ಷದಲ್ಲೂ ಕೆಲಸ ಮಾಡಿದ ಅನುಭವ ಅವರಿಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಸ್ತಾಪಿಸಿದರು. ಎಐಸಿಸಿ ಕೂಡ ಜಿ.ಎಸ್. ಪಾಟೀಲ್ ಅವರ ಆಯ್ಕೆಯನ್ನು ಅನುಮೋದಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 14, 2026 12:39 PM
Loading...
Unable to load recommendations.
Follow Us