ಆಂಧ್ರದಲ್ಲಿಯೂ ಕೆಜಿಎಫ್ ಮಾದರಿ ಚಿನ್ನದ ನಿಕ್ಷೇಪ ಪತ್ತೆ, ಗ್ರಾಮಸ್ಥರು ನೆಲ ಅಗೆಯಲು ಆರಂಭಿಸಿದ್ದಾರೆ! ವಿಡಿಯೋ ನೋಡಿ

ಈಗಾಗಲೇ ತುಗ್ಗಲಿ ಮಂಡಲದ ಜೊನ್ನಗಿರಿಯಲ್ಲಿ ವಜ್ರಗಳು ಪತ್ತೆಯಾಗುತ್ತಿದ್ದರೆ, ಪಗಿದಾರಾಯಿಯ ಚಿನ್ನದ ಗಣಿಗಳಿಂದ ಚಿನ್ನ ತೆಗೆಯುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಆಸ್ಪರಿನಲ್ಲಿ ಚಿನ್ನದ ನಿಕ್ಷೇಪಗಳಿರುವುದನ್ನು ಜಿಎಸ್ ಐ ತಂಡ ಬಹಿರಂಗಪಡಿಸಿದ್ದು, ಗ್ರಾಮಸ್ಥರು ಸಂತಸದಲ್ಲಿ ನೆಲ ಅಗೆಯಲು ಆರಂಭಿಸಿದ್ದಾರೆ.

ಆಂಧ್ರದಲ್ಲಿಯೂ ಕೆಜಿಎಫ್ ಮಾದರಿ ಚಿನ್ನದ ನಿಕ್ಷೇಪ ಪತ್ತೆ, ಗ್ರಾಮಸ್ಥರು ನೆಲ ಅಗೆಯಲು ಆರಂಭಿಸಿದ್ದಾರೆ! ವಿಡಿಯೋ ನೋಡಿ
|

Updated on:Dec 15, 2023 | 2:02 PM

ಕರ್ನೂಲು ಜಿಲ್ಲೆಗೆ ಒಂದು ವಿಶೇಷತೆ ಇದೆ. ಇಲ್ಲಿನ ಬೆಳೆ ಗದ್ದೆಗಳಲ್ಲಿ ಬೆಳೆಗಳಿಗಿಂತ ವಜ್ರಗಳು ದೊರೆಯುವುದೇ ಹೆಚ್ಚು. ಇದರಿಂದ ರೈತರು ಬೆಳೆ ಬೆಳೆಯುವುದಕ್ಕಿಂತ ವಜ್ರದ ಹುಡುಕಾಟದಲ್ಲಿಯೇ ಹೆಚ್ಚು ಆಸಕ್ತಿ ತೋರುತ್ತಿರುತ್ತಾರೆ. ರೈತರೊಂದಿಗೆ ಕೃಷಿ ಕಾರ್ಮಿಕರು ಹಾಗೂ ಸುತ್ತಮುತ್ತಲಿನ ಜನರು ವಜ್ರ ಬೇಟೆ ಮುಂದುವರಿಸಿದ್ದಾರೆ. ಎಲ್ಲರಿಗೂ ಆಶ್ಚರ್ಯವಾಗುವಂತೆ, ಕೇಂದ್ರ ಭೂವಿಜ್ಞಾನ ತಜ್ಞರು ಚಿನ್ನ ಸಹ (Gold Mines) ಸಿಗುತ್ತದೆ ಎಂಬ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಜಿಎಸ್‌ಐ ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿಗಳು ಬಹಿರಂಗ
ಸಆಸ್ಪರಿ ಮಂಡಲ ಚಿರುಮಾನು ದೊಡ್ಡಿ, ಆಸ್ಪರಿ ಅಟ್ಟೆಕಲ್ಲು ಸೇರಿದಂತೆ 5 ಗ್ರಾಮಗಳ ಗಡಿ ಭಾಗದ ಗ್ರಾಮಗಳನ್ನು ಜಿಎಸ್‌ಐ (GSI Survey) ಭೂಗರ್ಭ ಇಲಾಖೆ ತಂಡ ಇತ್ತೀಚೆಗೆ ಸಮೀಕ್ಷೆ ನಡೆಸಿತ್ತು. ಆಸ್ಪರಿ ಮಂಡಲದ ಹಲವು ಗ್ರಾಮಗಳಲ್ಲಿ ಚಿನ್ನದ ನಿಕ್ಷೇಪಗಳಿವೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ನಿನ್ನೆ ಗುರುವಾರ ವಿಜಯವಾಡದಲ್ಲಿ ನಡೆದ ಜಿಎಸ್‌ಐ ರಾಜ್ಯ ಮಂಡಳಿ ಸಭೆಯಲ್ಲಿ ಅಧಿಕಾರಿಗಳು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಕರ್ನೂಲ್ ಜಿಲ್ಲೆಯ ಆಸ್ಪರಿ ಮಂಡಲದಲ್ಲಿ ಚಿನ್ನದ ನಿಕ್ಷೇಪಗಳಿವೆ. ಈ ನಿಕ್ಷೇಪಗಳ ಗಾತ್ರ, ಗುಣಮಟ್ಟ ಮತ್ತು ವಿಸ್ತೀರ್ಣ ಕುರಿತು ಚರ್ಚೆ ನಡೆಯಿತು. ಉನ್ನತ ಅಧಿಕಾರಿಗಳು ಜಿಎಸ್‌ಐ ತಂಡಕ್ಕೆ ಸಂಪೂರ್ಣ ವಿವರಣೆ ನೀಡುವಂತೆ ಸೂಚಿಸಿದರು. ಶೀಘ್ರದಲ್ಲೇ ಆಸ್ಪರಿ ಮಂಡಲಕ್ಕೆ ಜಿಎಸ್‌ಐ ಜಿಎಸ್‌ಐ ತಂಡಗಳು ಭೇಟಿ ನೀಡುವ ಸಾಧ್ಯತೆ ಇದೆ ಎಂದು ತೋರುತ್ತದೆ.

ಈಗಾಗಲೇ ತುಗ್ಗಲಿ ಮಂಡಲದ ಜೊನ್ನಗಿರಿಯಲ್ಲಿ ವಜ್ರಗಳು ಪತ್ತೆಯಾಗುತ್ತಿದ್ದರೆ, ಪಗಿದಾರಾಯಿಯ ಚಿನ್ನದ ಗಣಿಗಳಿಂದ ಚಿನ್ನ ತೆಗೆಯುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಆಸ್ಪರಿನಲ್ಲಿ ಚಿನ್ನದ ನಿಕ್ಷೇಪಗಳಿರುವುದನ್ನು ಜಿಎಸ್ ಐ ತಂಡ ಬಹಿರಂಗಪಡಿಸಿದ್ದು, ಗ್ರಾಮಸ್ಥರು ಸಂತಸದಲ್ಲಿ ನೆಲ ಅಗೆಯಲು ಆರಂಭಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:59 pm, Fri, 15 December 23

Follow us
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್