ಜಿಎಸ್​ಟಿ ದರ ಇಳಿಕೆ; ಬೆಂಗಳೂರಿಗರ ರಿಯಾಕ್ಷನ್ ಇದು

Updated on: Sep 04, 2025 | 11:59 AM

GST rationalization decision, reaction of Bengalureans: ಕೇಂದ್ರ ಸರ್ಕಾರ ಜಿಎಸ್​ಟಿ ದರ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಿಸಿದೆ. ನಾಲ್ಕು ಇದ್ದ ಜಿಎಸ್​ಟಿ ಸ್ಲ್ಯಾಬ್​ಗಳನ್ನು ಎರಡಕ್ಕೆ ಇಳಿಸಿದೆ. ಶೇ. 12 ಮತ್ತು ಶೇ. 28ರ ಸ್ಲ್ಯಾಬ್​ಗಳನ್ನು ರದ್ದು ಮಾಡಲಾಗಿದೆ. ಕೇಂದ್ರದ ಈ ಜಿಎಸ್​ಟಿ ಇಳಿಕೆಯ ಕ್ರಮವನ್ನು ಬೆಂಗಳೂರಿಗರು ಸ್ವಾಗತಿಸಿದ್ದಾರೆ. ಜಿಎಸ್​ಟಿ ಸರಳೀಕರಣದಿಂದ ಸಾಕಷ್ಟು ಬೆಲೆ ಕಡಿಮೆ ಆಗಲಿದ್ದು, ಇದರಿಂದ ಜನರಿಗೆ ಹೊರೆ ತಗ್ಗುತ್ತದೆ ಎಂದು ಬೆಂಗಳೂರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 4: ಕೇಂದ್ರ ಸರ್ಕಾರ ಜಿಎಸ್​ಟಿ (gst) ದರ ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಿಸಿದೆ. ನಾಲ್ಕು ಇದ್ದ ಜಿಎಸ್​ಟಿ ಸ್ಲ್ಯಾಬ್​ಗಳನ್ನು ಎರಡಕ್ಕೆ ಇಳಿಸಿದೆ. ಶೇ. 12 ಮತ್ತು ಶೇ. 28ರ ಸ್ಲ್ಯಾಬ್​ಗಳನ್ನು ರದ್ದು ಮಾಡಲಾಗಿದೆ. ಶೇ. 5 ಮತ್ತು ಶೇ. 18ರ ಸ್ಲ್ಯಾಬ್ ಮಾತ್ರ ಜಾರಿಯಲ್ಲಿರಲಿವೆ. ಶೇ. 12 ಮತ್ತು ಶೇ. 28 ರಷ್ಟು ಇದ್ದ ಜಿಎಸ್​ಟಿ ದರಗಳನ್ನು ಕ್ರಮವಾಗಿ ಶೇ. 5 ಮತ್ತು ಶೇ. 18ಕ್ಕೆ ಇಳಿಸಲಾಗಿದೆ. ಇದರೊಂದಿಗೆ ಬಹಳಷ್ಟು ಸರಕು ಮತ್ತು ಸೇವೆಗಳ ಬೆಲೆಯಲ್ಲಿ ಗಣನೀಯ ಇಳಿಕೆ ಆಗುತ್ತಿದೆ. ಸೆಪ್ಟೆಂಬರ್ 22ರಿಂದ ಹೊಸ ದರಗಳು ಜಾರಿಗೆ ಬರಲಿವೆ. ಕೇಂದ್ರದ ಈ ಜಿಎಸ್​ಟಿ ಇಳಿಕೆಯ ಕ್ರಮವನ್ನು ಬೆಂಗಳೂರಿಗರು ಸ್ವಾಗತಿಸಿದ್ದಾರೆ. ಜಿಎಸ್​ಟಿ ಸರಳೀಕರಣದಿಂದ ಸಾಕಷ್ಟು ಬೆಲೆ ಕಡಿಮೆ ಆಗಲಿದ್ದು, ಇದರಿಂದ ಜನರಿಗೆ ಹೊರೆ ತಗ್ಗುತ್ತದೆ ಎಂದು ಬೆಂಗಳೂರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published on: Sep 04, 2025 11:57 AM
Follow Us
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More