Karnataka Assembly Polls; ಕಾಂಗ್ರೆಸ್ ಪಕ್ಷ ಸೇರುವ ಇಚ್ಛೆಯೊಂದಿಗೆ ಬಂದಿದ್ದ ಜಿಟಿ ದೇವೇಗೌಡ ಸ್ವಲ್ಪ ಸಮಯ ನನ್ನೊಂದಿಗೆ ತಿರುಗಾಡಿದರು: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 13, 2023 | 4:24 PM

ಆದರೆ, ಬಂದವರು ಬಂದ ಹಾಗೆಯೇ ವಾಪಸ್ಸು ಹೋಗಿ ಪುನಃ ಜೆಡಿಎಸ್ ಪಕ್ಷಕ್ಕೆ ಸೇರಿಕೊಂಡು ಈಗ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕುಹುಕವಾಡಿದರು.

ಮೈಸೂರು: ಚಾಮುಂಡೇಶ್ವರಿಯಲ್ಲಿ ಇಂದು ವೇದಿಕೆ ಕೆಳಗೆ ಕೋಪಾವಿಷ್ಟರಾಗಿದ್ದ ಸಿದ್ದರಾಮಯ್ಯ (Siddaramaiah) ವೇದಿಕೆ ಮೇಲೆ ಶಾಂತಚಿತ್ತರಾಗಿ ತಮ್ಮ ಎಂದಿನ ಹಾಸ್ಯಭರಿತ ಮಾತುಗಳಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿ ಜಿಟಿ ದೇವೇಗೌಡರ (GT Devegowda) ಕಾಲೆಳೆದರು. ಜಿಟಿಡಿ ಉನ್ನತ ವ್ಯಾಸಂಗ ಪೂರೈಸಿದ್ದಕ್ಕಾಗಿ ಅವರನ್ನು ಉನ್ನತ ಶಿಕ್ಷಣ ಸಚಿವನನ್ನಾಗಿ (higher education minister) ಮಾಡಲಾಗಿತ್ತು ಅಂತ ಸಿದ್ದರಾಮಯ್ಯ ಗೇಲಿಮಾಡಿದರು. ಜಿಟಿಡಿ ಕಾಂಗ್ರೆಸ್ ಪಕ್ಷ ಸೇರುವ ಬಯಕೆಯೊಂದಿಗೆ ತನ್ನಲ್ಲಿಗೆ ಬಂದಿದ್ದರು ಮತ್ತು ಕೆಲ ಸಮಯದವರೆಗೆ ತಮ್ಮ ಜೊತೆ ತಿರುಗಾಡಿದರು ಅಂತ ಸಿದ್ದರಾಮಯ್ಯ ಹೇಳಿದರು. ಆದರೆ, ಬಂದವರು ಬಂದ ಹಾಗೆಯೇ ವಾಪಸ್ಸು ಹೋಗಿ ಪುನಃ ಜೆಡಿಎಸ್ ಪಕ್ಷಕ್ಕೆ ಸೇರಿಕೊಂಡು ಈಗ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಅವರು ಕುಹುಕವಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.