ಚಾಮರಾಜನಗರ: ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ದೇವಸ್ಥಾನದ ಹುಂಡಿ ಹಣ ಕಳ್ಳತನ ನಡೆದಿದೆ. ಕನ್ನ ಹಾಕುವ ಮುನ್ನ ದೇವರಿಗೆ ಕೈಮುಗಿದು ಕುಂಕುಮ ಹಚ್ಚಿಕೊಂಡು ಬಳಿಕ ಖದೀಮ ಕೈಚಳಕ ತೋರಿದ್ದಾನೆ. ಕಳ್ಳನ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೇ ದೇಗುಲದಲ್ಲಿ ಈ ಹಿಂದೆಯೂ ಕಳ್ಳತನ ನಡೆದಿದ್ದ ಕಾರಣ ಸಿಸಿಟಿವಿ ಅಳವಡಿಸಲಾಗಿತ್ತು ಎನ್ನಲಾಗಿದೆ.
ಚಾಮರಾಜನಗರ, ಏಪ್ರಿಲ್ 09: ಕಳ್ಳ-ಕಾಕರಿಗೆ ಸಾಮಾನ್ಯವಾಗಿ ಯಾವುದರ ಮೇಲೂ ಭಯ ಇರೋದಿಲ್ಲ. ಆದರೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ದೇವಸ್ಥಾನದ ಹುಂಡಿ ಕದಿಯಲು ಬಂದ ಖದೀಮನೋರ್ವ, ಕನ್ನ ಹಾಕುವ ಮೊದಲು ದೇವರಿಗೆ ಕೈ ಮುಗಿದು ಕುಂಕುಮವನ್ನೂ ಹಚ್ಚಿಕೊಂಡಿದ್ದಾನೆ. ಗ್ರಾಮದ ಶಕ್ತಿ ದೇವತೆ ಪಟ್ಟದರಾಣಿ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಈ ಹಿಂದೆಯೂ ಹುಂಡಿ ಹಣ ಕಳುವಾಗಿದ್ದ ಕಾರಣಕ್ಕೆ ದೇಗುಲಕ್ಕೆ ಸಿಸಿಟಿವಿ ಕ್ಯಾಮರಾ ಹಾಕಲಾಗಿತ್ತು. ಈ ಹಿನ್ನೆಲೆ ಕಳ್ಳತನದ ದೃಶ್ಯ ಸೆರೆಯಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us