ವಿಮಾನ ದುರಂತ: ಪ್ರಧಾನಿ ಏಕೆ ರಾಜೀನಾಮೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್

Updated on: Jun 13, 2025 | 5:50 PM

ಗುಜರಾತಿನ ಅಹಮದಾಬಾದ್‌ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕೆಲವರು ಈ ದುರಂತಕ್ಕೆ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕೆಂಬ ಮಾತುಗಳು ಸಹ ಕೇಳಿಬರುತ್ತಿವೆ. ಇದಕ್ಕೆ ಇದೀಗ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿ, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ.

ಬೆಂಗಳೂರು, (ಜೂನ್ 13): ಗುಜರಾತಿನ ಅಹಮದಾಬಾದ್‌ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಕೆಲವರು ಈ ದುರಂತಕ್ಕೆ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕೆಂಬ ಮಾತುಗಳು ಸಹ ಕೇಳಿಬರುತ್ತಿವೆ. ಇದಕ್ಕೆ ಇದೀಗ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿ, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಪ್ರಕರಣಕ್ಕೂ ಪ್ರಧಾನಿ ಮೋದಿಗೆ ಏನು ಸಂಬಂಧ? ಮೋದಿ ಏನು ಪೈಲೆಟಾ? ಅವರು ಏಕೆ ರಾಜೀನಾಮೆ ಕೊಡಬೇಕು? ನಾಗರಿಕ ವಿಮಾನಯಾನ ಸಚಿವರು ರಾಜೀನಾಮೆ ಕೊಡಬೇಕು. ವಿಮಾನದ ಇಂಜಿನ್ ಫೆಲ್ಯೂರ್ ಆಗಿದ್ರೆ ಹೇಗೆ? ಟೇಕಾಫ್​​ಗೂ ಮುನ್ನ ಎಲ್ಲಾ ಕ್ಲಿಯರೆನ್ಸ್ ಆಗಿದೆ ಅಂತಾ ಅಲ್ವಾ? ಎಂದು ಹೇಳಿದರು.

 

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More