Sardar Patel Birth Anniversary: ಸರ್ದಾರ್ ಪಟೇಲರ ಜಯಂತಿ, ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್

Updated on: Oct 31, 2025 | 9:37 AM

ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ.

ಅಹಮದಾಬಾದ್, ಅಕ್ಟೋಬರ್ 31: ಇಂದು ಉಕ್ಕಿನ ಮನುಷ್ಯ ಸದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ. ಗುಜರಾತಿನ ಏಕ್ತಾ ನಗರದಲ್ಲಿ ನಿರ್ಮಿಸಲಾಗಿರುವ ಏಕತಾ ಪ್ರತಿಮೆ ಬಳಿ ಗಣರಾಜ್ಯೋತ್ಸವ ಮಾದರಿಯ ಪರೇಡ್ ನಡೆದಿದೆ. ರಾಷ್ಟ್ರೀಯ ಏಕತಾ ದಿವಸ್ ಎಂಬ ಈ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವದ ಮೆರವಣಿಗೆಯ ಮಾದರಿಯಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರ ಪೊಲೀಸ್ ಪಡೆಗಳ ತುಕಡಿಗಳು ಭಾಗವಹಿಸಿವೆ.

ಹತ್ತು ರಾಜ್ಯಗಳ ಟ್ಯಾಬ್ಲೋಗಳು, ಸೂರ್ಯಕಿರಣ್ ಏರೋಬ್ಯಾಟಿಕ್ ತಂಡದ ಫ್ಲೈ-ಪಾಸ್ಟ್ ಮತ್ತು ಮಹಿಳಾ ನೇತೃತ್ವದ ತುಕಡಿಗಳು ಪ್ರಮುಖ ಪಾತ್ರ ವಹಿಸಿವೆ.ನವೆಂಬರ್ 1 ರಿಂದ 15 ರವರೆಗೆ ಭಾರತ್ ಪರ್ವ್ ಮತ್ತು ಭಾರತದ ಉಕ್ಕಿನ ಮನುಷ್ಯನನ್ನು ಗೌರವಿಸಲು ಪಾದಯಾತ್ರೆಗಳೊಂದಿಗೆ ಉತ್ಸವಗಳು ಮುಂದುವರೆಯಲಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More