ಮಹಾರಾಜ ಟೂರ್ನಿಯಿಂದ ಹೊರಬಿದ್ದ ಗುಲ್ಬರ್ಗ ಮಿಸ್ಟಿಕ್ಸ್
Gulbarga Mystics vs Bengaluru Blasters: ಈ ಮೂಲಕ 12.3 ಓವರ್ಗಳಲ್ಲಿ 126 ರನ್ ಬಾರಿಸಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ದ್ವಿತೀಯ ಕ್ವಾಲಿಫೈಯರ್ಗೆ ಎಂಟ್ರಿ ಕೊಟ್ಟಿರುವ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಇಂದು (ಆಗಸ್ಟ್ 27) ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಎದುರಿಸಲಿದೆ.
ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್ ತಂಡವು ದ್ವಿತೀಯ ಕ್ವಾಲಿಫೈಯರ್ಗೆ ಎಂಟ್ರಿ ಕೊಟ್ಟರೆ, ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ಎಲ್ಆರ್ ಚೇತನ್ 20 ಎಸೆತಗಳಲ್ಲಿ 40 ರನ್ ಬಾರಿಸಿದರು. ಆ ಬಳಿಕ ಬಂದ ವಿಕೆಟ್ ಕೀಪರ್ ಬ್ಯಾಟರ್ ಸೂರಜ್ ಅಹುಜಾ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 44 ರನ್ ಸಿಡಿಸಿದರು.
ಈ ಮೂಲಕ 12.3 ಓವರ್ಗಳಲ್ಲಿ 126 ರನ್ ಬಾರಿಸಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ದ್ವಿತೀಯ ಕ್ವಾಲಿಫೈಯರ್ಗೆ ಎಂಟ್ರಿ ಕೊಟ್ಟಿರುವ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಇಂದು (ಆಗಸ್ಟ್ 27) ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಎದುರಿಸಲಿದೆ.
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

