ಮಹಾರಾಜ ಟೂರ್ನಿಯಿಂದ ಹೊರಬಿದ್ದ ಗುಲ್ಬರ್ಗ ಮಿಸ್ಟಿಕ್ಸ್
Gulbarga Mystics vs Bengaluru Blasters: ಈ ಮೂಲಕ 12.3 ಓವರ್ಗಳಲ್ಲಿ 126 ರನ್ ಬಾರಿಸಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ದ್ವಿತೀಯ ಕ್ವಾಲಿಫೈಯರ್ಗೆ ಎಂಟ್ರಿ ಕೊಟ್ಟಿರುವ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಇಂದು (ಆಗಸ್ಟ್ 27) ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಎದುರಿಸಲಿದೆ.
ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಬೆಂಗಳೂರು ಬ್ಲಾಸ್ಟರ್ಸ್ ತಂಡವು ದ್ವಿತೀಯ ಕ್ವಾಲಿಫೈಯರ್ಗೆ ಎಂಟ್ರಿ ಕೊಟ್ಟರೆ, ಗುಲ್ಬರ್ಗ ಮಿಸ್ಟಿಕ್ಸ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಲ್ಬರ್ಗ ಮಿಸ್ಟಿಕ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬೆಂಗಳೂರು ಬ್ಲಾಸ್ಟರ್ಸ್ ಪರ ಎಲ್ಆರ್ ಚೇತನ್ 20 ಎಸೆತಗಳಲ್ಲಿ 40 ರನ್ ಬಾರಿಸಿದರು. ಆ ಬಳಿಕ ಬಂದ ವಿಕೆಟ್ ಕೀಪರ್ ಬ್ಯಾಟರ್ ಸೂರಜ್ ಅಹುಜಾ 20 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 44 ರನ್ ಸಿಡಿಸಿದರು.
ಈ ಮೂಲಕ 12.3 ಓವರ್ಗಳಲ್ಲಿ 126 ರನ್ ಬಾರಿಸಿ ಬೆಂಗಳೂರು ಬ್ಲಾಸ್ಟರ್ಸ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ದ್ವಿತೀಯ ಕ್ವಾಲಿಫೈಯರ್ಗೆ ಎಂಟ್ರಿ ಕೊಟ್ಟಿರುವ ಬೆಂಗಳೂರು ಬ್ಲಾಸ್ಟರ್ಸ್ ತಂಡವು ಇಂದು (ಆಗಸ್ಟ್ 27) ಮಂಗಳೂರು ಡ್ರ್ಯಾಗನ್ಸ್ ತಂಡವನ್ನು ಎದುರಿಸಲಿದೆ.
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

