ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್ ಪತ್ತೆ: ಮುಂದೇನಾಯ್ತು?

Edited By:

Updated on: Feb 27, 2026 | 4:00 PM

ಕುರಿ ವ್ಯಾಪಾರ ಮಾಡಿಕೊಂಡಿದ್ದ ವ್ಯಕ್ತಿ ಬಳಿ ಪಿಸ್ತೂಲ್ ಪತ್ತೆಯಾಗಿದೆ. ಕುರಿ ವ್ಯಾಪಾರ ಮಾಡಿಕೊಂಡಿದ್ದ ಬೆಂಗಳೂರಿನ ಸೈಯದ್ ಮಸೂದ್ ಎನ್ನುವಾತ ಪಿಸ್ತೂಲ್ ಇಟ್ಟುಕೊಂಡಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಿ ಸೈಯದ್ ಮಸೂದ್ ಹಾಗೂ ಜಾವೇದ್ ಆಲಂ ಎನ್ನುವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಭೋಪಾಲ್ ಮೂಲದ ವ್ಯಕ್ತಿಯಿಂದ ಪಿಸ್ತೂಲ್ ತರಿಸಿಕೊಂಡಿರುವುದಾಗಿ ಮಸೂದ್ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸಿಸಿಬಿ, ಬಂಧಿತರಿಂದ 0.32 MM ಪಿಸ್ತೂಲ್, 50 ಜೀವಂತ ಗುಂಡುಗಳು ವಶಕ್ಕೆ ಪಡೆದುಕೊಂಡಿದ್ದು, ಆದ್ರೆ, ಮಸೂದ್ ಯಾವ ಕಾರಣಕ್ಕೆ ಗನ್ ತರಿಸಿಕೊಂಡಿದ್ದ ಎಂಬ ಬಗ್ಗೆ ತನಿಖೆ ಮುಂದುವರೆಸಿದೆ.

ಬೆಂಗಳೂರು, (ಫೆಬ್ರವರಿ 27): ಕುರಿ ವ್ಯಾಪಾರ (sheep selling merchant) ಮಾಡಿಕೊಂಡಿದ್ದ ವ್ಯಕ್ತಿ ಬಳಿ ಪಿಸ್ತೂಲ್ ಪತ್ತೆಯಾಗಿದೆ. ಕುರಿ ವ್ಯಾಪಾರ ಮಾಡಿಕೊಂಡಿದ್ದ ಬೆಂಗಳೂರಿನ (Bengaluru) ಸೈಯದ್ ಮಸೂದ್ ಎನ್ನುವಾತ ಪಿಸ್ತೂಲ್ ಇಟ್ಟುಕೊಂಡಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಿ ಸೈಯದ್ ಮಸೂದ್ ಹಾಗೂ ಜಾವೇದ್ ಆಲಂ ಎನ್ನುವರನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಭೋಪಾಲ್ ಮೂಲದ ವ್ಯಕ್ತಿಯಿಂದ ಪಿಸ್ತೂಲ್ ತರಿಸಿಕೊಂಡಿರುವುದಾಗಿ ಮಸೂದ್ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸಿಸಿಬಿ, ಬಂಧಿತರಿಂದ 0.32 MM ಪಿಸ್ತೂಲ್, 50 ಜೀವಂತ ಗುಂಡುಗಳು ವಶಕ್ಕೆ ಪಡೆದುಕೊಂಡಿದ್ದು, ಆದ್ರೆ, ಮಸೂದ್ ಯಾವ ಕಾರಣಕ್ಕೆ ಗನ್ ತರಿಸಿಕೊಂಡಿದ್ದ ಎಂಬ ಬಗ್ಗೆ ತನಿಖೆ ಮುಂದುವರೆಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us