ಗುರ್ಜಾಪುರ ಬ್ರಿಡ್ಜ್ ಫುಲ್: 30 ಹಳ್ಳಿಗಳು ಸಂಪರ್ಕ ಕಡಿತ, ಜನರು ಪರದಾಟ
ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ.ಇದರಿಂದ ಗುರ್ಜಾಫುರ ಬ್ರಿಡ್ಜ್ ಕಂ ಬ್ಯಾರೇಜ್ ನ 194 ಗೇಟ್ ಓಪನ್ ಮಾಡಲಾಗಿದ್ದು, ಬ್ರಿಡ್ಜ್ ಮೇಲೆ ವಾಹನಗಳ ಓಡಾಟಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ರಾಯಚೂರು-ಯಾದಗಿರಿ ರಸ್ತೆ ಸಂಪರ್ಕ ಬಂದ್ ಆಗಿದೆ.
ರಾಯಚೂರು, (ಆಗಸ್ಟ್ 24): ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ.ಇದರಿಂದ ಗುರ್ಜಾಫುರ ಬ್ರಿಡ್ಜ್ ಕಂ ಬ್ಯಾರೇಜ್ ನ 194 ಗೇಟ್ ಓಪನ್ ಮಾಡಲಾಗಿದ್ದು, ಬ್ರಿಡ್ಜ್ ಮೇಲೆ ವಾಹನಗಳ ಓಡಾಟಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ರಾಯಚೂರು-ಯಾದಗಿರಿ ರಸ್ತೆ ಸಂಪರ್ಕ ಬಂದ್ ಆಗಿದೆ. ಎರಡು ಜಿಲ್ಲೆಗಳ ಸುಮಾರು 30 ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಈ ಬಗ್ಗೆ ನಮ್ಮ ರಾಯಚೂರು ಜಿಲ್ಲಾ ಪ್ರತಿನಿಧಿ ಭೀಮೇಶ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ..
