ಗುರ್ಜಾಪುರ ಬ್ರಿಡ್ಜ್ ಫುಲ್: 30 ಹಳ್ಳಿಗಳು ಸಂಪರ್ಕ ಕಡಿತ, ಜನರು ಪರದಾಟ

Edited By:

Updated on: Aug 24, 2025 | 11:35 AM

ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ.ಇದರಿಂದ ಗುರ್ಜಾಫುರ ಬ್ರಿಡ್ಜ್ ಕಂ ಬ್ಯಾರೇಜ್ ನ 194 ಗೇಟ್ ಓಪನ್ ಮಾಡಲಾಗಿದ್ದು, ಬ್ರಿಡ್ಜ್ ಮೇಲೆ ವಾಹನಗಳ ಓಡಾಟಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ರಾಯಚೂರು-ಯಾದಗಿರಿ ರಸ್ತೆ ಸಂಪರ್ಕ ಬಂದ್ ಆಗಿದೆ.

ರಾಯಚೂರು, (ಆಗಸ್ಟ್ 24): ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ.ಇದರಿಂದ ಗುರ್ಜಾಫುರ ಬ್ರಿಡ್ಜ್ ಕಂ ಬ್ಯಾರೇಜ್ ನ 194 ಗೇಟ್ ಓಪನ್ ಮಾಡಲಾಗಿದ್ದು, ಬ್ರಿಡ್ಜ್ ಮೇಲೆ ವಾಹನಗಳ ಓಡಾಟಕ್ಕೆ ನಿಷೇಧಿಸಲಾಗಿದೆ. ಹೀಗಾಗಿ ರಾಯಚೂರು-ಯಾದಗಿರಿ ರಸ್ತೆ ಸಂಪರ್ಕ ಬಂದ್ ಆಗಿದೆ. ಎರಡು ಜಿಲ್ಲೆಗಳ ಸುಮಾರು 30 ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತವಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಈ ಬಗ್ಗೆ ನಮ್ಮ ರಾಯಚೂರು ಜಿಲ್ಲಾ ಪ್ರತಿನಿಧಿ ಭೀಮೇಶ್ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ..

Follow Us
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More