AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರಾವಳಿ’ ಸಿನಿಮಾ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?

‘ಕರಾವಳಿ’ ಸಿನಿಮಾ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?

ಮಾಲತೇಶ ಜಗ್ಗೀನ್
| Edited By: |

Updated on:Jul 07, 2026 | 5:39 PM

Share

ಮುಖ್ಯಾಂಶಗಳು

  • ‘ಕರಾವಳಿ’ ಸಿನಿಮಾದ ಟ್ರೇಲರ್​ನಲ್ಲಿ ಇಲ್ಲ ಪ್ರಜ್ವಲ್ ದೇವರಾಜ್ ಧ್ವನಿ.
  • ಕಾರ್ಯಕ್ರಮಕ್ಕೆ ಬಂದು ಅಸಮಾಧಾನ ವ್ಯಕ್ತಪಡಿಸಿದ ಅಭಿಮಾನಿಗಳು.
  • ಟ್ರೇಲರ್ ಪ್ರೀಮಿಯರ್ ಕಾರ್ಯಕ್ರಮಕ್ಕೆ ನಟ ಪ್ರಜ್ವಲ್ ದೇವರಾಜ್ ಗೈರು.

ತೆರೆಕಾಣಲು ಸಜ್ಜಾಗಿರುವ ‘ಕರಾವಳಿ’ ಚಿತ್ರತಂಡದ ಕಿರಿಕ್ ಈಗ ಬೀದಿಗೆ ಬಂದಿದೆ. ಈ ಚಿತ್ರದ ಡೈರೆಕ್ಟರ್ ಗುರುದತ್ ಗಾಣಿಗ ಹಾಗೂ ಹೀರೋ ಪ್ರಜ್ವಲ್ ದೇವರಾಜ್ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಗೊತ್ತಾಗಿದೆ. ಈ ವಿವಾದಕ್ಕೆ ಕಾರಣವೇನು ಎಂಬುದನ್ನು ಗುರುದತ್ ವಿವರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಬಿಡುಗಡೆಗೆ ಸಜ್ಜಾಗಿರುವ ‘ಕರಾವಳಿ’ (Karavali) ಸಿನಿಮಾ ತಂಡದ ಕಿರಿಕ್ ಈಗ ಬೀದಿಗೆ ಬಂದಿದೆ. ಈ ಸಿನಿಮಾದ ನಿರ್ದೇಶಕ ಗುರುದತ್ ಗಾಣಿಗ ಮತ್ತು ನಟ ಪ್ರಜ್ವಲ್ ದೇವರಾಜ್ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಗೊತ್ತಾಗಿದೆ. ಈ ಸಿನಿಮಾದ ಟ್ರೇಲರ್ ಪ್ರೀಮಿಯರ್ ವೇಳೆ ಪ್ರಜ್ವಲ್ ಅಭಿಮಾನಿಗಳು ಬಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ರೇಲರ್​ನಲ್ಲಿ ಪ್ರಜ್ವಲ್ ಅವರ ಧ್ವನಿ ಇಲ್ಲ ಎಂಬುದೇ ಫ್ಯಾನ್ಸ್ ಅಸಮಾಧಾನಕ್ಕೆ ಕಾರಣ ಆಗಿದೆ. ಆ ಬಗ್ಗೆ ‘ಟಿವಿ9 ಕನ್ನಡ’ ಜೊತೆ ನಿರ್ದೇಶಕ ಗುರುದತ್ ಗಾಣಿಗ ಅವರು ಮಾತನಾಡಿದ್ದಾರೆ. ಈ ವಿವಾದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ. ಮಾತುಕಥೆ ಮೂಲಕ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ತಾವು ಸಿದ್ಧ ಎಂದು ಗುರುದತ್ ಗಾಣಿಗ ಅವರು ಹೇಳಿದ್ದಾರೆ. ಟ್ರೇಲರ್ ಪ್ರೀಮಿಯರ್ ಕಾರ್ಯಕ್ರಮಕ್ಕೆ ಪ್ರಜ್ವಲ್ ದೇವರಾಜ್ ಅವರು ಗೈರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 07, 2026 04:26 PM

Follow Us