Video: ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಟೆಕ್ಕಿಯೊಬ್ಬ ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಪರಿಣಾಮ ಓರ್ವ ಅಮಾಯಕನ ಪ್ರಾಣ ಹೋಗಿದೆ. ಈ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಕಾರು ಚಲಾಯಿಸುವಾಗ ನಿದ್ರೆ ಬಂದ ಪರಿಣಾಮ ನಿಯಂತ್ರಣ ತಪ್ಪಿ ಕಾನೂನು ವಿದ್ಯಾರ್ಥಿಯ ಮೇಲೆ ಕಾರು ಹತ್ತಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾನೂನು ವಿದ್ಯಾರ್ಥಿ ಹರ್ಷ್ ತನ್ನ ಸ್ನೇಹಿತ ಮೋಕ್ಷ ಜತೆ ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಚಂಚಲ್ ಢಾಬಾಗೆ ಹೋಗಿದ್ದರು.
ಗುರುಗ್ರಾಮ, ಜೂನ್ 27: ಟೆಕ್ಕಿಯೊಬ್ಬ ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಪರಿಣಾಮ ಓರ್ವ ಅಮಾಯಕನ ಪ್ರಾಣ ಹೋಗಿದೆ. ಈ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಕಾರು ಚಲಾಯಿಸುವಾಗ ನಿದ್ರೆ ಬಂದ ಪರಿಣಾಮ ನಿಯಂತ್ರಣ ತಪ್ಪಿ ಕಾನೂನು ವಿದ್ಯಾರ್ಥಿಯ ಮೇಲೆ ಕಾರು ಹತ್ತಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾನೂನು ವಿದ್ಯಾರ್ಥಿ ಹರ್ಷ್ ತನ್ನ ಸ್ನೇಹಿತ ಮೋಕ್ಷ ಜತೆ ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಚಂಚಲ್ ಢಾಬಾಗೆ ಹೋಗಿದ್ದರು.
ಢಾಬಾದಲ್ಲಿ ಹೆಚ್ಚು ಜನರಿದ್ದ ಕಾರಣ ಹರ್ಷ್ನ ಮತ್ತೊಬ್ಬ ಸ್ನೇಹಿತ ಅಭಿಷೇಕ್ ಕೂಡ ಅಲ್ಲಿಗೆ ಬಂದಿದ್ದಾರೆ.ಇಬ್ಬರೂ ಸರ್ವಿಸ್ ರಸ್ತೆ ರೇಲಿಂಗ್ನಲ್ಲಿ ಒಟ್ಟಿಗೆ ನಿಂತು ಮಾತನಾಡುತ್ತಿದ್ದರು. ಈ ಮಧ್ಯೆ, ವೇಗವಾಗಿ ಬಂದ ಕಾರು ಕಾರಿಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ.
ಅಪಘಾತದಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಕಾನೂನು ವಿದ್ಯಾರ್ಥಿ ಹರ್ಷ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಇಂಜಿನಿಯರ್ ಮೋಹಿತ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಆತ ಒಪ್ಪಿಕೊಂಡಿದ್ದಾನೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್ ಕಿಸ್ ಮಾಡಿದ ಯುವಕ

