Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಸತ್ತ ದಿನವೇ ಸಂಚು ಮಾಡಿದ್ರು: ಗುರುಪ್ರಸಾದ್ ಪತ್ನಿ ಸುಮಿತ್ರಾ ಶಾಕಿಂಗ್ ಮಾತು

ಗಂಡ ಸತ್ತ ದಿನವೇ ಸಂಚು ಮಾಡಿದ್ರು: ಗುರುಪ್ರಸಾದ್ ಪತ್ನಿ ಸುಮಿತ್ರಾ ಶಾಕಿಂಗ್ ಮಾತು

Malatesh Jaggin
| Updated By: ಮದನ್​ ಕುಮಾರ್​

Updated on: Feb 20, 2025 | 6:57 PM

ಗುರುಪ್ರಸಾದ್ ನಿರ್ದೇಶನದ ‘ಎದ್ದೇಳು ಮಂಜುನಾಥ 2’ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿದೆ. ಸಿನಿಮಾ ಬಿಡುಗಡೆಗೆ ಗುರುಪ್ರಸಾದ್ ಪತ್ನಿ ಸುಮಿತ್ರಾ ಅವರು ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಈಗ ವಿವರಿಸಿದ್ದಾರೆ. ಟಿವಿ9 ಜೊತೆ ಸುಮಿತ್ರಾ ಅವರ ಮಾತನಾಡಿದ್ದಾರೆ.

‘ಎದ್ದೇಳು ಮಂಜುನಾಥ 2’ ಸಿನಿಮಾದ ಕೆಲಸಗಳು ಕೊನೇ ಹಂತದಲ್ಲಿ ಇರುವಾಗ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡು ನಿಧನರಾದರು. ಆ ಬಳಿಕ ‘ಎದ್ದೇಳು ಮಂಜುನಾಥ 2’ ಸಿನಿಮಾವನ್ನು ತಮ್ಮ ವಶಕ್ಕೆ ಪಡೆಯುವ ಸಲುವಾಗಿ ಕೆಲವರು ಸಂಚು ಮಾಡಿದರು ಎಂದು ಪತ್ನಿ ಸುಮಿತ್ರಾ ಆರೋಪಿಸಿದ್ದಾರೆ. ಗುರುಪ್ರಸಾದ್ ನಿಧನದ ಬಳಿಕ ಏನೆಲ್ಲ ಆಯಿತು ಎಂಬುದನ್ನು ಸುಮಿತ್ರಾ ಅವರು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.