ಜ್ಞಾನ ದೇಗುಲ ಘೋಷ ವಾಕ್ಯದ ವಿವಾದ ಬೆನ್ನಲ್ಲೇ ವಿಡಿಯೋ ಬಿಡುಗಡೆ; ಶಿಕ್ಷಕರಾಗಿ ನ್ಯಾಯದ ಪಾಠ ಮಾಡಿದ H.C.ಮಹದೇವಪ್ಪ

Edited By: ಆಯೇಷಾ ಬಾನು

Updated on: Feb 21, 2024 | 1:33 PM

ವಸತಿ ಶಾಲೆಗಳ ಘೋಷವಾಕ್ಯ ಬದಲಾವಣೆ ಆದಾಗ ಮಾತನಾಡಿದ್ದ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಈ ವಿಚಾರದಲ್ಲಿ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ. ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ. ಇದೊಂದು ವಿವಾದದ ಅಂಶವೇ ಅಲ್ಲ ಎಂದಿದ್ದರು. ಸದ್ಯ ಈಗ ಇದರ ಬೆನ್ನಲ್ಲೇ ಶಿಕ್ಷಕರು ತಪ್ಪು ಮಾಡಿದರೂ ಮಕ್ಕಳು ಪ್ರಶ್ನೆ ಮಾಡಬೇಕು ಎಂದು ಅರ್ಥ ನೀಡುವ ವಿಡಿಯೋ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು, ಫೆ.21: ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಅನ್ನೋ ಘೋಷವಾಕ್ಯವನ್ನು ಬದಲಾಯಿಸಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಅಂತ ಹಲವು ಜಿಲ್ಲೆಗಳ ವಸತಿ ಶಾಲೆಗಳಲ್ಲಿ ಬರೆಸಲಾಗಿತ್ತು. ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೆ ಈಗ ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಕಿರುಚಿತ್ರದ ವಿಡಿಯೋ ಬಿಡುಗಡೆ ಮಾಡಲಾಗಿದೆ. ಪ್ರಶ್ನಿಸುವುದನ್ನು ಕಲಿಯಬೇಕು ಎಂಬ ಅರ್ಥದ ಕಿರುಚಿತ್ರದಲ್ಲಿ ಶಿಕ್ಷಕರ ಪಾತ್ರದಲ್ಲಿ H.C.ಮಹದೇವಪ್ಪ ಅಭಿನಯಿಸಿದ್ದಾರೆ.

ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ ಅನ್ನೋ ಘೋಷವಾಕ್ಯವನ್ನು ಬದಲಾಯಿಸಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಅಂತ ಹಲವು ಜಿಲ್ಲೆಗಳ ವಸತಿ ಶಾಲೆಗಳಲ್ಲಿ ಬರೆಯಲಾಗಿತ್ತು. ರಾಷ್ಟ್ರಕವಿ ಕುವೆಂಪು ಅವರ ನುಡಿಯನ್ನ ರಾಜ್ಯ ಸರ್ಕಾರ ಬದಲಿಸಿದೆ ಅಂತ ವಿಪಕ್ಷಗಳು ಆಕ್ರೋಶ ಹೊರಹಾಕಿತ್ತು. ಆಗ ಜ್ಞಾನ ದೇಗುಲವಿದು ಬದಲಾಗಿ, ಧೈರ್ಯದಿಂದ‌ ಪ್ರಶ್ನಿಸು ಎಂದು ಬದಲಿಸುವ ಆದೇಶವನ್ನು ಸರ್ಕಾರ ಅಧಿಕೃತವಾಗಿ ಮಾಡಿಲ್ಲ. ಬದಲಿಗೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಜನವರಿ 18 ರಂದು ಟೆಲಿಗ್ರಾಂ ನಲ್ಲಿ ಘೋಷವಾಕ್ಯ ಬದಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ವಾದ-ವಿವಾದದ ಬಳಿಕ ವಸತಿ ಶಾಲೆಗಳಲ್ಲಿ ಮೊದಲು ಇದ್ದ ಕುವೆಂಪು ಅವರ ಘೋಷವಾಕ್ಯವನ್ನೇ ಬರೆಸಲಾಯಿತು. ಆದರೆ ಈಗ ಸಮಾಜ ಕಲ್ಯಾಣ ಇಲಾಖೆಯ ಸಚಿವರಿಂದ ಕಿರುಚಿತ್ರದ ವಿಡಿಯೋ ರಿಲೀಸ್‌ ಆಗಿದೆ.

ಕಿರುಚಿತ್ರದಲ್ಲಿ ಸಚಿವ ಮಹದೇವಪ್ಪನವರು ಶಿಕ್ಷಕರ ಪಾತ್ರದಲ್ಲಿ ನಟಿಸಿದ್ದಾರೆ. ಶಾಲೆಯಲ್ಲಿ ಶಿಕ್ಷಕರು ತಪ್ಪು ಮಾಡಿದರೂ ವಿದ್ಯಾರ್ಥಿಗಳು ಪ್ರಶ್ನೆ ಮಾಡಬೇಕು ಎಂಬ ಅರ್ಥದಲ್ಲಿ ಕಿರು ಚಿತ್ರ ನಿರ್ಮಾಣವಾಗಿದೆ. ಕಿರುಚಿತ್ರದಲ್ಲಿ ವಿದ್ಯಾರ್ಥಿಗಳೊಂದಿಗೆ ಸಚಿವರು ಸಂವಾದ ಮಾಡಿದ್ದಾರೆ. ಅನ್ಯಾಯವನ್ನ ಪ್ರಶ್ನೆ ಮಾಡಬೇಕು. ದೌರ್ಜನ್ಯಗಳ ವಿರುದ್ಧ ಪ್ರತಿಭಟಿಸಬೇಕು. ಅನ್ಯಾಯವಾದವರ ಪರವಾಗಿ ನಿಲ್ಲಬೇಕು. ಆಗ ನಮ್ಮ ಬದುಕಿಗೊಂದು ಅರ್ಥಬರಲಿದೆ. ಇದನ್ನೇ ನಮ್ಮ ದೇಶದ ಸಂವಿಧಾನ ಹೇಳಿದ್ದು ಎಂದು ವಿದ್ಯಾರ್ಥಿಗಳಿಗೆ ಸಚಿವ ಮಹದೇವಪ್ಪ ಪಾಠ ಮಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More