ದಳಪತಿ ವಿಜಯ್ರನ್ನು ದೇವರೇ ಕಾಪಾಡಬೇಕು ಎಂದ ಹೆಚ್.ಡಿ. ಕುಮಾರಸ್ವಾಮಿ: ಕಾರಣ ಇಲ್ಲಿದೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಟಿವಿಕೆ ವಿಜಯ್ ಘೋಷಿಸಿರುವ ಉಚಿತ ಯೋಜನೆಗಳ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಪ್ರಶ್ನಿಸಿದ್ದಾರೆ. ತಮಿಳುನಾಡಿನ ಬಜೆಟ್ 3.30 ಲಕ್ಷ ಕೋಟಿ ರೂ. ಇದ್ದು, ವಿಜಯ್ ಯೋಜನೆಗಳಿಗೆ 6-7 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇಷ್ಟೊಂದು ಹಣವನ್ನು ಹೇಗೆ ಹೊಂದಿಸುತ್ತಾರೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಹಾಸನ, ಮೇ 08: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಅಗತ್ಯವಿದೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ 7 ಲಕ್ಷ ಕೋಟಿ ರೂ. ಬೇಕಾಗುತ್ತದೆ. ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಅವರು ಹೇಗೆ ಹೊಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ವಿಜಯ್ರನ್ನು “ದೇವರೇ ಕಾಪಾಡಬೇಕು” ಎಂದು ಅವರು ವ್ಯಂಗ್ಯವಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: May 08, 2026 12:49 PM
Loading...
Unable to load recommendations.
Follow Us
