ಮುಂದಿನ ಜನ್ಮದಲ್ಲೂ ಅವರು ನನಗೆ ತಮ್ಮ ಆಗೋದೂ ಬೇಡ ಎಂದು ಖಡಾಖಂಡಿತವಾಗಿ ಹೇಳಿದ ಹೆಚ್​.ಡಿ. ಕುಮಾರಸ್ವಾಮಿ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಈ ಜನ್ಮದಲ್ಲಿ ಅಂತೂ ಅಂತಹ ತಮ್ಮ ನನಗೆ ಬೇಡ ಎಂದು ಖಡಾಖಂಡಿತವಾಗಿ ಹೇಳಿದರು.

ಮುಂದಿನ ಜನ್ಮದಲ್ಲೂ ಅವರು ನನಗೆ ತಮ್ಮ ಆಗೋದೂ ಬೇಡ ಎಂದು ಖಡಾಖಂಡಿತವಾಗಿ ಹೇಳಿದ ಹೆಚ್​.ಡಿ. ಕುಮಾರಸ್ವಾಮಿ
| Updated By: ಸಾಧು ಶ್ರೀನಾಥ್​

Updated on: Aug 05, 2023 | 4:26 PM

ಬೆಂಗಳೂರು, ಆಗಸ್ಟ್​ 5: ವಿದೇಶ ಪ್ರವಾದಿಂದ ನಿನ್ನೆಯಷ್ಟೇ ವಾಪಸಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಶನಿವಾರಜೆಡಿಎಸ್ ಕಛೇರಿ ಜೆಪಿ ಭವನದಲ್ಲಿ ಸುದ್ದಿಗೊಷ್ಠಿ ನಡೆಸಿ, ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತನಾಡಿದರು. ಅದರಲ್ಲೂ ನಿರ್ದಿಷ್ಟವಾಗಿ ‘ಅಣ್ಣ ಹೇಳ್ತಾರೆ ತಮ್ಮ ಕೇಳಬೇಕು’ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (dk shivakumar) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಈ ಜನ್ಮದಲ್ಲಿ ಅಂತೂ ಅಂತಹ ತಮ್ಮ ನನಗೆ ಬೇಡ ಎಂದು ಹೆಚ್​ಡಿಕೆ ಖಡಾಖಂಡಿತವಾಗಿ ಹೇಳಿದರು. ಮುಂದಿನ ಜನ್ಮದಲ್ಲೂ ಅವರು ನನಗೆ ತಮ್ಮ (brother) ಆಗೋದೂ ಬೇಡ ಎಂದೂ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ಟಾಂಗ್ ಕೊಟ್ಟರು!

ಸುದ್ದಿಗೊಷ್ಠಿಯಲ್ಲಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಿಷ್ಟು: ವರ್ಗಾವಣೆ ಬಗ್ಗೆ ಮಾತಾಡೋಕೆ ಅಸಹ್ಯ ಆಗುತ್ತದೆ. ಪರಮೇಶ್ವರ್ ನಾನು ಏನು ಸಲಹೆ ಕೊಟ್ಟಿದ್ದೀನಿ ಹೇಳಪ್ಪ ಜನರ ಮುಂದೆ. ಬಿಡಿಎ ಸಂಬಂಧಿಸಿದ ಗಲಾಟೆ ನನ್ನಿಂದ ಶುರುವಾಗಿತ್ತಾ? ಪೊಲೀಸರ ವರ್ಗಾವಣೆ ಯಲ್ಲಿ ನಾನು ಯಾವುದಕ್ಕೆ ಹಸ್ತಕ್ಷೇಪ ಮಾಡಿದ್ದೇನೆ? ನಾನು ಹಿಟ್ ಅಂಡ್ ರನ್ನಾ? ಯಾವುದರಲ್ಲಿ ಹಿಟ್ ಅಂಡ್ ರನ್? ಹಿಂದೆ ಸಿದ್ದರಾಮಯ್ಯರನ್ನು ಮಜಾವಾದಿ ಎಂದು ಸಾಮಾನ್ಯವಾಗಿ ಹೇಳಿದ್ದೆ. ಕೊನೆಗೆ ಅದು ಎಲ್ಲಿ ಹೋಯ್ತು? ಅವನು ಯಾವನೋ ದುಬೈನಿಂದ ಕರೆಸಿ ಏನೇನೋ ಮಾಡಿದ್ರಲ್ಲ. ಗೃಹ ಸಚಿವರಿಗೂ ನಿಮಗೂ ಘರ್ಷಣೆ ಆಗಿದೆಯಲ್ಲ? ಸಿಸಿಟಿವಿ ಇರಲಿಲ್ವಾ? ವರ್ಗಾವಣೆ ಪ್ರಕ್ರಿಯೆ ಆಗುವಾಗ ನಿಮ್ ಜೊತೆ ಯಾರು ಕೂತಿದ್ರು? ಅದೆಲ್ಲ ನಿಮಗೆ ಗೊತ್ತಿಲ್ವಾ? ಗುತ್ತಿಗೆದಾರರ ಕೆಂಪಣ್ಣ ಇವಾಗ ಎಲ್ಲಿಗೆ ಹೋಗಿದ್ದಾರೆ? ನಿನ್ನೆ ಬೆಳಿಗ್ಗೆ ನಡೆದಿರುವ ಘಟನೆ 710 ಕೋಟಿ ಬಿಡುಗಡೆ ಆಗಬೇಕಲ್ಲ. ಅದಕ್ಕೆ ‌ 26 ಅಂಶಗಳ ಮೇಲೆ ತನಿಖೆ ಅಂತೆ ಎಂದೆಲ್ಲಾ ಕಾಂಗ್ರೆಸ್​ ನಾಯಕರ ಟೇಕೆಗೆ ಕುಮಾರಸ್ವಾಮಿ ಪ್ರತ್ಯುತ್ತರ ನೀಡಿದರು.

Follow us
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ