AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಸ್ತೆಗಳನ್ನು ಬೇಸಿಗೆಯಲ್ಲಿ ರಿಪೇರಿ ಮಾಡಿಸಿ ಚರಂಡಿಗಳನ್ನು ಸ್ವಚ್ಛಗೊಳಿಸಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ

ಬೆಂಗಳೂರಿನ ರಸ್ತೆಗಳನ್ನು ಬೇಸಿಗೆಯಲ್ಲಿ ರಿಪೇರಿ ಮಾಡಿಸಿ ಚರಂಡಿಗಳನ್ನು ಸ್ವಚ್ಛಗೊಳಿಸಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 15, 2024 | 5:57 PM

Share

ನಮ್ಮ ವರದಿಗಾರ ನಗರದ ರಾಚೇನಹಳ್ಳಿಯಲ್ಲಿ ಒಂದು ಕೈಯಲ್ಲಿ ಮೈಕ್ ಮತ್ತೊಂದರಲ್ಲಿ ಕೊಡೆ ಹಿಡಿದುಕೊಂಡು ಪಡುತ್ತಿರುವ ಅವಸ್ಥೆ ನೋಡಿ. ರಸ್ತೆಯಲ್ಲಿ ಅರ್ಧ ಟೈರ್ ಮುಳುಗುವಷ್ಟು ನೀರು ಹರಿಯುತ್ತಿದೆ. ಮುಂದೆ ರಸ್ತೆ ಸಂಪೂರ್ಣವಾಗಿ ಬ್ಲಾಕ್ ಆಗಿದೆಯಂತೆ. ಬೆಂಗಳೂರು ಹಿಂದೊಮ್ಮೆ ಪೆನ್ಷನರ್ಸ್ ಪ್ಯಾರಡೈಸ್ ಅನಿಸಿಕೊಂಡಿತ್ತು!

ಬೆಂಗಳೂರು: ನಗರದಲ್ಲಿ ಮಳೆಯಿಂದ ಉಂಟಾಗಿರುವ ಅವಾಂತರಗಳು ಒಂದೆರಡಲ್ಲ. ನಗರದ ರಸ್ತೆಗಳನ್ನು ಬೇಸಿಗೆ ಕಾಲದಲ್ಲಿ ದುರಸ್ತಿ ಮಾಡಿ ಮಾನ್ಸೂನ್ ಸೀಸನ್ ಗೆ ಯೋಗ್ಯವನ್ನಾಗಿ ಮಾಡಬೇಕಿತ್ತು. ಆದರೆ ಬೃಹತ್ ಬೆಂಗಳೂರು ನಗರ ಪಾಲಿಕೆಯಲ್ಲಿ ಅಧಿಕಾರಿಗಳೇ ದೊರೆಗಳು! ಪಾಲಿಕೆಯ ಆಯುಕ್ತ ತುಷಾರ್ ಗಿರಿನಾಥ್ ನೀಡುವ ಹೇಳಿಕೆ ಮತ್ತು ರಸ್ತೆಗಳ ಸ್ಥಿತಿಯ ನಡುವೆ ಯಾವುದೇ ಸಂಬಂಧವಿರಲ್ಲ. ರಸ್ತೆಗುಂಡಿಗಳನ್ನು ಮುಚ್ಚಲಾಗಿದೆ ಎನ್ನುತ್ತಾರೆ, ಪ್ರಾಯಶಃ ಅವರ ಮನೆ ಮುಂದಿನ ಭಾಗದಲ್ಲಿ ಮಾತ್ರ ಆ ಕೆಲಸ ಆಗಿರಬೇಕು. ಇನ್ನು ನಗರ ಉಸ್ತುವಾರಿ ಸಚಿವರಂತೂ ತಮ್ಮ ಮುಖ್ಯಮಂತ್ರಿಯನ್ನು ಉಳಿಸುವ ಕೆಲಸದಲ್ಲಿ ಬ್ಯೂಸಿ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   Bengaluru Rain: ಬೆಂಗಳೂರು ಮಳೆ ನಿಂತರೂ ಅವಾಂತರ ನಿಂತಿಲ್ಲ, ಕರೆಯಂತಾದ ರಸ್ತೆಗಳು, ಹಲವೆಡೆ ಟ್ರಾಫಿಕ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.