ಸಿಎಂ ಪತ್ನಿ ನ್ಯಾಯಾಲಯದ ಮೊರೆ ಹೋಗಿದ್ದರೆ ಪೂರ್ತಿ 3.16 ಜಮೀನು ಅವರಿಗೆ ಸಿಗುತಿತ್ತು: ಎಎಸ್ ಪೊನ್ನಣ್ಣ, ಸಿಎಂ ಕಾನೂನು ಸಲಹೆಗಾರ

ಸಿಎಂ ಪತ್ನಿ ನ್ಯಾಯಾಲಯದ ಮೊರೆ ಹೋಗಿದ್ದರೆ ಪೂರ್ತಿ 3.16 ಜಮೀನು ಅವರಿಗೆ ಸಿಗುತಿತ್ತು: ಎಎಸ್ ಪೊನ್ನಣ್ಣ, ಸಿಎಂ ಕಾನೂನು ಸಲಹೆಗಾರ
|

Updated on:Jul 04, 2024 | 5:49 PM

ಸಿಎಂ ಪತ್ನಿಗೆ 2019ರಲ್ಲಿ ಸೈಟು ಸಿಕ್ಕಿವೆ ಎಂದು ಹೇಳಿದ ಪೊನ್ನಣ್ಣ, 50:50ಅನುಪಾತದಲ್ಲಿ ಸೈಟು ಹಂಚುವ ನಿಯಮವನ್ನು ಪುನರ್ ಪರಿಶೀಲಿಸುವ ನಿರ್ಧಾರವನ್ನು ಮುಖ್ಯಮಂತ್ರಿ ತೆಗೆದುಕೊಂಡಿದ್ದಾರೆ ಎಂದರು. ಈ ನಿಯಮಾವಳಿ ಅಡಿ ಆಗಿರುವ ನಿವೇಶನಗಳ ಹಂಚಿಕೆಯ ಸಮಗ್ರ ತನಿಖೆ ನಡೆಸುವ ಬಗ್ಗೆ ಅವರು ಮಾತಾಡಿದ್ದಾರೆ ಎಂದು ವಕೀಲರೂ ಆಗಿರುವ ಶಾಸಕ ಪೊನ್ನಣ್ಣ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ಶಾಸಕ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಇಂದು ನಗರದಲ್ಲಿ ಪತ್ರಿಕಾ ಗೋಷ್ಠಿಯೊಂದನ್ನು ನಡೆಸಿ ಮುಡಾ ಹಗರಣದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದರು. ಒಂದೆರಡು ಪ್ರಶ್ನೆಗಳಿಗೆ ಅವರಿಂದ ಸೂಕ್ತ ಉತ್ತರ ಸಿಗಲಿಲ್ಲ. ಆ ವಿಚಾರ ಬೇರೆ, ಈಗ ಸೃಷ್ಟಿಯಾಗಿರುವ ವಿವಾದ ಬೇರೆ ಅಂತ ಅವರು ಹೇಳಿ ಪ್ರಶ್ನೆಯನ್ನು ತೇಲಿಸುವ ಪ್ರಯತ್ನ ಮಾಡಿದರು. ಮುಖ್ಯಮಂತ್ರಿಯವರ ಪತ್ನಿ ತಮ್ಮ 3.16 ಜಮೀನನ್ನು ಮುಡಾ ಸ್ವಾದೀನ ಮಾಡಿಕೊಂಡಿರುವುದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಹೋಗಿದ್ದರೆ ಪೂರ್ತಿ ಜಮೀನು ಅವರಿಗೆ ಸಿಗುತ್ತಿತ್ತೇನೋ? ಅದರೆ, ಹಾಗೆ ಮಾಡದೆ 15ವರ್ಷಗಳ ಹಿಂದೆ ಸ್ವಾಧೀನವಾದ ಜಮೀನು ಬದಲಿಗೆ ಸಿಕ್ಕ ಪರಿಹಾರವನ್ನು ಸ್ವೀಕರಿಸಿದ್ದು ಅವರಿಂದ ಅಪರಾಧವಾಗಿಬಿಟ್ಟಿದೆ ಎಂದು ಪೊನ್ನಣ್ಣ ಹೇಳಿದರು. ನಿಯಮಾವಳಿಯ ಆಧಾರದಲ್ಲಿ ಬೇರೆಯವರಿಗೂ ನಿವೇಶನಗಳು ಅಲಾಟ್ ಆಗಿವೆ, ಅವರಿಗೆಲ್ಲ ಸೈಟು ಸಿಗದೆ ಕೇವಲ ಮುಖ್ಯಮಂತ್ರಿಯವರ ಪತ್ನಿಗೆ ಮಾತ್ರ ಸಿಕ್ಕಿದ್ದರೆ ಅದು ನಿಶ್ಚಿತವಾಗಿಯೂ ವಿವಾದಾಸ್ಪದ ಅನಿಸುತಿತ್ತು ಎಂದು ಪೊನ್ನಣ್ಣ ಹೇಳಿದರು. ಮುಡಾ, ಸಿಎಂ ಪತ್ನಿಯವರ ಜಮೀನು ಸ್ವಾಧೀನ ಮಾಡಿಕೊಳ್ಳುವಾಗ ನೋಟೀಸ್ ನೀಡಿರಲಿಲ್ಲ, ಅವರಿಗಷ್ಟೇ ಅಲ್ಲ ಜಮೀನು ಕಳೆದುಕೊಂಡ ಬೇರೆಯವರಿಗೂ ಮುಡಾ ನೊಟೀಸ್ ಕೊಟ್ಟಿರಲಿಲ್ಲ ಎಂದು ಪೊನ್ನಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    Virajpet Election 2023 Winner: ವಿರಾಜಪೇಟೆಯಲ್ಲಿ ಬಿಜೆಪಿಗೆ ಅನಿರೀಕ್ಷಿತ ಸೋಲು; ಗೆದ್ದುಬೀಗಿದ ಪೊನ್ನಣ್ಣ- ಹ್ಯಾಟ್ರಿಕ್ ಸರದಾರನಿಗೆ ಮುಖಭಂಗ

Published On - 3:43 pm, Thu, 4 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ