ಆಲಿಕಲ್ಲು ಸಹಿತ ಗಾಳಿ ಮಳೆಗೆ ಪತರುಗುಟ್ಟಿದ ಬೆಂಗಳೂರು: ಮರಬಿದ್ದು ಕಾರುಗಳು ಜಖಂ, ಅಪಾರ ಹಾನಿ

Updated on: May 22, 2026 | 9:21 AM

ಬೆಂಗಳೂರಿನಲ್ಲಿ ಸುರಿದ ಭಾರಿ ಆಲಿಕಲ್ಲು ಮಳೆ ಮತ್ತು ಗಾಳಿಗೆ ವ್ಯಾಪಕ ಅನಾಹುತಗಳು ಸಂಭವಿಸಿವೆ. ಹಲವೆಡೆ ಮರಗಳು ಉರುಳಿ ಬಿದ್ದು ಕಾರುಗಳು ಜಖಂಗೊಂಡಿವೆ. ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ರಸ್ತೆ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾಗಿದೆ. ಮೆಟ್ರೋ ಸೇವೆಗಳಲ್ಲೂ ವ್ಯತ್ಯಯ ಉಂಟಾಗಿದ್ದು, ರಾಜ್ಯಕ್ಕೆ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಮೇ 22: ನಗರದಲ್ಲಿ ಸುರಿದ ಭಾರಿ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದ ವ್ಯಾಪಕ ಅನಾಹುತಗಳು ಸೃಷ್ಟಿಯಾಗಿವೆ. ಹಲವೆಡೆ ಮರಗಳು ಬುಡ ಸಮೇತ ಉರುಳಿ ಬಿದ್ದು ವಾಹನಗಳಿಗೆ ಹಾನಿ ಉಂಟುಮಾಡಿವೆ. ಮಹಾಲಕ್ಷ್ಮಿ ಲೇಔಟ್‌ನ ಸಿದ್ದಾರೂಢ ಪಾರ್ಕ್ ಬಳಿ ಮೂರು ಕಾರುಗಳು ಜಖಂಗೊಂಡರೆ, ರಾಜಾಜಿನಗರದ ಶಂಕರಮಠ ರಸ್ತೆ ಮತ್ತು ವೆಸ್ಟ್ ಆಫ್ ಕಾರ್ಡ್ ರಸ್ತೆಯಲ್ಲಿ ಮರ ಬಿದ್ದು ಐದಕ್ಕೂ ಹೆಚ್ಚು ಕಾರುಗಳಿಗೆ ಹಾನಿಯಾಗಿದೆ. ಶಂಕರಮಠ ರಸ್ತೆಯಲ್ಲಿ ಮರ ಬಿದ್ದ ಕಾರಣ 15 ಬಿಎಂಟಿಸಿ ಬಸ್‌ಗಳು ಎರಡು ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ನಿಲ್ಲಬೇಕಾಯಿತು. ವಿದ್ಯುತ್ ಕಂಬಗಳು ಉರುಳಿ, ಮೆಟ್ರೋ ಸಂಚಾರದಲ್ಲೂ ವ್ಯತ್ಯಯ ಉಂಟಾಗಿತ್ತು. ಯುಬಿ ಸಿಟಿ ಬಳಿ ರಸ್ತೆ ಕುಸಿತದಿಂದ ಕಾರು ಸಿಲುಕಿಕೊಂಡಿತ್ತು. ಈ ನಡುವೆ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More