ಚಿಕ್ಕಮಗಳೂರು ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಆಲಿಕಲ್ಲು ಸಮೇತ ಜೋರು ಮಳೆ, ಜನರಲ್ಲಿ ಸಂತಸ

ಅರುಣ್​ ಕುಮಾರ್​ ಬೆಳ್ಳಿ

Updated on: May 07, 2024 | 6:47 PM

ಪಶ್ಚಿಮ ಘಟ್ಟಗಳ ಮಡಿಲಲ್ಲಿರುವ ಚಿಕ್ಕಮಗಳೂರಲ್ಲೂ ಕಳೆದ ವರ್ಷ ಕೊರತೆ ಮಳೆಯಾಗಿತ್ತು. ಈ ಬಾರಿ ಬಿಸಿಲು ಸಹ ಸಾಮಾನ್ಯಕ್ಕಿಂತ ಹೆಚ್ಚು ತೀಕ್ಷ್ನವಾಗಿದೆ. ಹಾಗಾಗಿ, ಜನ ಮಳೆಯಾಗುವುದನ್ನು ಎದುರು ನೋಡುತ್ತಿದ್ದರು. ಚಿಕ್ಕಮಗಳೂರು ನಗರದಲ್ಲಿ ಮಳೆಯಿಂದ ಆಶ್ರಯ ಪಡೆಯಲು ಜನ ಅಂಗಡಿ ಮುಂಗಟ್ಟುಗಳ ಮುಂದೆ ನಿಂತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಚಿಕ್ಕಮಗಳೂರು: ಮಳೆ ಬಂತೋ ಮಾರಾಯಾ ಗುಡಿ ಕಟ್ಟೋ ಶಿವರಾಯ ಅಂತ ಉತ್ತರ ಕರ್ನಾಟಕದ (North Karnataka) ಹಲವಾರು ಭಾಗಗಳಲ್ಲಿ ಮಕ್ಕಳು ಮಳೆ ಸುರಿಯತೊಡಗಿದಾಗ ಹಾಡುತ್ತಾ ಮಳೆಯಲ್ಲಿ ಆಡುತ್ತಾರೆ. ಮನೆ ಮುಂದೆ ಮರಳಿದ್ದರೆ, ಹಸಿ ಮರಳಲ್ಲಿ ಗೋಪುರ, ಗುಡಿಸಲು ಮತ್ತು ತಮಗೆ ತೋಚಿದ ಆಕೃತಿಗಳನ್ನು ರಚಿಸುತ್ತಾರೆ. ಮಳೆಯೆಂದರೆ ಮಕ್ಕಳಿಗೂ ಬಹಳ ಇಷ್ಟ ಮಾರಾಯ್ರೇ. ಚಿಕ್ಕಮಗಳೂರು ನಗರ (Chikmagalur city) ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಇವತ್ತು ಸಾಯಂಕಾಲ ಗುಡುಗು-ಮಿಂಚು ಮತ್ತು ಅಲಿಕಲ್ಲು (hailstorm) ಸಹಿತ ಜೋರು ಮಳೆಯಾಗಿದೆ. ಪಶ್ಚಿಮ ಘಟ್ಟಗಳ ಮಡಿಲಲ್ಲಿರುವ ಚಿಕ್ಕಮಗಳೂರಲ್ಲೂ ಕಳೆದ ವರ್ಷ ಕೊರತೆ ಮಳೆಯಾಗಿತ್ತು. ಈ ಬಾರಿ ಬಿಸಿಲು ಸಹ ಸಾಮಾನ್ಯಕ್ಕಿಂತ ಹೆಚ್ಚು ತೀಕ್ಷ್ನವಾಗಿದೆ. ಹಾಗಾಗಿ, ಜನ ಮಳೆಯಾಗುವುದನ್ನು ಎದುರು ನೋಡುತ್ತಿದ್ದರು. ಚಿಕ್ಕಮಗಳೂರು ನಗರದಲ್ಲಿ ಮಳೆಯಿಂದ ಆಶ್ರಯ ಪಡೆಯಲು ಜನ ಅಂಗಡಿ ಮುಂಗಟ್ಟುಗಳ ಮುಂದೆ ನಿಂತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ನಿನ್ನೆ ಬೆಂಗಳೂರು ನಗರದಲ್ಲೂ ಉತ್ತಮ ಮಳೆಯಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರಿನಲ್ಲಿಂದು ಅರ್ಧ ಗಂಟೆ ಸುರಿದ ಮಳೆಗೆ ಬಿದ್ದ 25 ಮರಗಳು, ಎಲ್ಲೆಲ್ಲಿ ಏನಾಗಿದೆ? ಇಲ್ಲಿದೆ ವಿವರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.