Halal Cut Vs Jhatka Cut: ಯುಗಾದಿ ಹಬ್ಬ ಮತ್ತು ಹೊಸತೊಡುಕು, ಮತ್ತೇ ಮುನ್ನೆಲೆಗೆ ಬಂದ ಹಲಾಲ್ ಕಟ್-ಜಟ್ಕಾ ಕಟ್ ವಿವಾದ

ಅರುಣ್​ ಕುಮಾರ್​ ಬೆಳ್ಳಿ

Updated on: Mar 21, 2023 | 4:51 PM

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾರ್ಯಕರ್ತರೊಬ್ಬರು, ಹಲಾಲ್ ಕಟ್ ಮಾಂಸದಂಗಡಿಗಳ ಮೂಲಕ ಮುಸಲ್ಮಾನರು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ, ಅದನ್ನು ನಿಲ್ಲಿಸಲು ಅಭಿಯಾನದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ಬೆಂಗಳೂರು: ನಾಳೆ ಯುಗಾದಿ ಹಬ್ಬ (Ugadi festival) ಮತ್ತು ನಾಡಿದ್ದು ಹೊಸತೊಡುಕು. ಹಲಾಲ್ ಕಟ್ (Halal Cut), ಜಟ್ಕಾ ಕಟ್ (Jhatka Cut) ವಿವಾದ ಇಂಥ ಸಂದರ್ಭದಲ್ಲಿ ಮುನ್ನೆಲೆಗೆ ಬಾರದಿರಲು ಸಾಧ್ಯವೇ? ಹಿಂದೂಪರ ಸಂಘಟನೆಯ ಕೆಲ ಕಾರ್ಯಕರ್ತರು ಮುಸಲ್ಮಾನರ ಹಲಾಲ್ ಕಟ್ ಮಾಂಸದಂಗಡಿಗಳಲ್ಲಿ ಮಾಂಸ ಖರೀದಿಸದಂತೆ ಹಿಂದೂಗಳಲ್ಲಿ ಜಾಗೃತಿ ಮೂಡಿಸಲು ಇಂದು ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಬಸವಗುಡಿಯವರೆಗೆ ಭಿತ್ತಿ ಪತ್ರಗಳನ್ನು ಹಂಚುವ ಅಭಿಯಾನ ಅರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪುನೀತ್ ಹೆಸರಿನ ಕಾರ್ಯಕರ್ತರೊಬ್ಬರು, ಹಲಾಲ್ ಕಟ್ ಮಾಂಸದಂಗಡಿಗಳ ಮೂಲಕ ಮುಸಲ್ಮಾನರು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ, ಅದನ್ನು ನಿಲ್ಲಿಸಲು ಅಭಿಯಾನದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದೇವೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.