ಹಳಿಯಾಳದಲ್ಲಿ ಬುರ್ಖಾ ಧರಿಸಿಕೊಂಡು ಬಂದ‌ ಮಹಿಳೆಯರ ಗ್ಯಾಂಗ್‌ನಿಂದ ಚಿನ್ನ ಕಳ್ಳತನ

ಹಳಿಯಾಳ (Haliyal)ದ ಶ್ರೀ ಪೇಟೆ ಬಸವೇಶ್ವರ ಅಂಗಡಿ ಸಂಕೀರ್ಣದಲ್ಲಿ ಬಂಗಾರ ಮತ್ತು ಬೆಳ್ಳಿಯ ಉಂಗುರ ಖರೀದಿಸುವ ಸೋಗಿನಲ್ಲಿ ಬಂದ ಬುರ್ಖಾ ಧರಿಸಿದ 3 ಮಹಿಳೆಯರು, ಕ್ಷಣಾರ್ಧದಲ್ಲಿ 416 ಗ್ರಾಂ. ಚಿನ್ನವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಕುರಿತು ಕಾರವಾರ ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ.

ಹಳಿಯಾಳದಲ್ಲಿ ಬುರ್ಖಾ ಧರಿಸಿಕೊಂಡು ಬಂದ‌ ಮಹಿಳೆಯರ ಗ್ಯಾಂಗ್‌ನಿಂದ ಚಿನ್ನ ಕಳ್ಳತನ
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 13, 2024 | 4:59 PM

ಉತ್ತರ ಕನ್ನಡ, ಫೆ.13: ಬುರ್ಖಾ ಧರಿಸಿಕೊಂಡು ಬಂದ‌ ಮಹಿಳೆಯರ ಗ್ಯಾಂಗ್‌ ಚಿನ್ನ ಕಳ್ಳತನ ಮಾಡಿದ ಘಟನೆ ಹಳಿಯಾಳ (Haliyal)ದ ಶ್ರೀ ಪೇಟೆ ಬಸವೇಶ್ವರ ಅಂಗಡಿ ಸಂಕೀರ್ಣದಲ್ಲಿ ನಡೆದಿದೆ. ಬಂಗಾರ ಮತ್ತು ಬೆಳ್ಳಿಯ ಉಂಗುರ ಖರೀದಿಸುವ ಸೋಗಿನಲ್ಲಿ  ಬುರ್ಖಾ ಧರಿಸಿದ 3 ಮಹಿಳೆಯರು ಹಾಗೂ ಮಾಸ್ಕ್ ಧರಿಸಿದ ಒಬ್ಬ ಯುವಕ ಆಗಮಿಸಿದ್ದರು.  ಈ ವೇಳೆ ಅಂಗಡಿ ಮಾಲೀಕರ ಗಮನ ಬೇರೆಡೆ ಸೆಳೆದು, ಕೌಂಟರ್‌ನಲ್ಲಿದ್ದ 366 ಗ್ರಾಂ. ಚಿನ್ನಾಭರಣ ಹಾಗೂ ಗ್ರಾಹಕರಿಂದ ದುರಸ್ತಿಗಾಗಿ ಬಂದಿದ್ದ 50 ಗ್ರಾಂ ಚಿನ್ನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಅಧಿಕ ಮೌಲ್ಯದ 416 ಗ್ರಾಂ. ಚಿನ್ನಾಭರಣ ಎಗರಿಸಿ ಪರಾರಿಯಾಗಿದ್ದಾರೆ. ಸುಮಾರು ಅರ್ಧ ಗಂಟೆ ಬಳಿಕ ಸಂಶಯಗೊಂಡ ಅಂಗಡಿ ಮಾಲಿಕ, ಕೌಂಟರ್ ಕೆಳಭಾಗದಲ್ಲಿ ಚಿನ್ನಾಭರಣ ತುಂಬಿದ ಡಬ್ಬದ ಹುಡುಕಾಟ ನಡೆಸಿದಾಗ ಡಬ್ಬ ಮಾಯವಾಗಿತ್ತು. ತಕ್ಷಣ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಬುರ್ಖಾಧಾರಿ ಮಹಿಳೆಯರ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಕುರಿತು ಕಾರವಾರ ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್