AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಭಯಸ್ತ ಅಲ್ಲ, ಮಾಗಡಿ ರೋಡ್​ನಲ್ಲಿ ಪೋಲಿ ಆಟಗಳನ್ನ ಆಡಿ ಬಂದವನು’; ಹಂಸಲೇಖ

‘ನಾನು ಭಯಸ್ತ ಅಲ್ಲ, ಮಾಗಡಿ ರೋಡ್​ನಲ್ಲಿ ಪೋಲಿ ಆಟಗಳನ್ನ ಆಡಿ ಬಂದವನು’; ಹಂಸಲೇಖ

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 26, 2021 | 4:27 PM

Share

ಸಾಹಿತಿ ಎಸ್​.ಜಿ.ಸಿದ್ದರಾಮಯ್ಯ ಅವರ ‘ಯರೆಬೇವು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಕೂಡ ಭಾಗವಹಿಸಿದ್ದರು.

ದಲಿತರ ಮನೆಯಲ್ಲಿ ಸವರ್ಣೀಯರ ವಾಸ್ತವ್ಯದ ಕುರಿತಂತೆ ಖ್ಯಾತ ಸಂಗೀತ ನಿರ್ದೇಶಕ, ಚಿತ್ರ ಸಾಹಿತಿ ಹಂಸಲೇಖ ನೀಡಿದ್ದ ಹೇಳಿಕೆ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಈ ಹೇಳಿಕೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದವು. ಈ ಹೇಳಿಕೆಗೆ ಅನೇಕರು ಆಕ್ರೋಶ ಹೊರ ಹಾಕಿದ್ದರು. ಕೆಲವರು ಹಂಸಲೇಖ ಅವರಿಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದರು. ಈ ಕಾರಣಕ್ಕೆ ಅವರ ಮನೆಗೆ ಪೊಲೀಸ್​ ಭದ್ರತೆ ಒದಗಿಸಲಾಗಿತ್ತು. ಈ ಪ್ರಕರಣದ ಬಗ್ಗೆ ಹಂಸಲೇಖ ಮೌನ ವಹಿಸಿದ್ದೇ ಹೆಚ್ಚು. ತಾವು ಭಯ ಪಟ್ಟುಕೊಂಡು ಬದುಕುವವರಲ್ಲ ಎನ್ನುವ ಮಾತನ್ನು ಅವರು ಹೇಳಿದ್ದಾರೆ. ‘ನಾನು ಭಯಸ್ತ ಅಲ್ಲ. ಮಾಗಡಿ ರೋಡ್​ನಲ್ಲಿ ಪೋಲಿ ಆಟಗಳನ್ನ ಆಡಿ ಬಂದವನು ನಾನು. ಅದೊಂದು ದೊಡ್ಡ ಚರಿತ್ರೆಯೇ ಇದೆ’ ಎಂದಿದ್ದಾರೆ ಹಂಸಲೇಖ. ಸಾಹಿತಿ ಎಸ್​.ಜಿ.ಸಿದ್ದರಾಮಯ್ಯ ಅವರ ‘ಯರೆಬೇವು’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಅವರು ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: Hamsalekha: ‘ಧರ್ಮೋಕ್ರಸಿ ತೊಲಗಲಿ, ಡೆಮಾಕ್ರಸಿ ಜಯಿಸಲಿ, ಸಿದ್ದರಾಮಯ್ಯ ಸಿಎಂ ಆಗಲಿ’: ಸಂಗೀತ ನಿರ್ದೇಶಕ ಹಂಸಲೇಖ ಆಶಯ