AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾಂತ್ರೀಕರಣವಾದ ಕೃಷಿಯಲ್ಲಿ ದೇಶೀ ಪದ್ದತಿ: ಹಂತಿ ಮೂಲಕ ಜೋಳದ ರಾಶಿ ಮಾಡಿದ ರೈತರು

ಯಾಂತ್ರೀಕರಣವಾದ ಕೃಷಿಯಲ್ಲಿ ದೇಶೀ ಪದ್ದತಿ: ಹಂತಿ ಮೂಲಕ ಜೋಳದ ರಾಶಿ ಮಾಡಿದ ರೈತರು

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Mar 02, 2024 | 10:19 AM

Share

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ಹಂತಿ ರಾಶಿ ಮಾಡಲಾಗಿದೆ. ಕನ್ನಡ ಜಾನಪದ ಪರಿಷತ್ ತಾಲೂಕು ಅಧ್ಯಕ್ಷರಾದ ದೇವೇಂದ್ರ ಗೋನಾಳ ಜಮೀನಿನಲ್ಲಿ ಹಂತಿ ರಾಶಿ ಮಾಡಲಾಯಿತು.

ಬೆಳ್ಳನ ಎರಡೆತ್ತು ಬೆಳ್ಳಿಯ ಬಾರಕೋಲು
ಬಂಗಾರದ ಕಡ್ಡಿ ಬಲಗೈಯಾಗ ಹಿಡಕೊಂಡು
ಹೊನ್ನ ಬಿತ್ತೆನೇ ಹೊಳಿ ಸಾಲ…. ಎಂಬ ಜಾನಪದ ಸೊಗಡಿನ ಹಂತಿ ಪದಗಳನ್ನು ಹಾಡುತ್ತಾ ರಾಶಿ ಮಾಡಲಾಗುತ್ತಿತ್ತು. ಹಂತಿ ರಾಶಿ ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ. ಮತ್ತು ಹಂತಿ ಪ್ರತಿಷ್ಠೆ ಕೂಡ ಆಗಿತ್ತು. ಆದರೆ ಯಾಂತ್ರಿಕ ಯುಗದಲ್ಲಿ ಎಲ್ಲ ಕೆಲಸಗಳು ತರಾತುರಿಯಲ್ಲಿ ಆಗಬೇಕು. ಹೀಗಾಗಿ ಎತ್ತುಗಳನ್ನು ಹೂಡಿ ಹಂತಿ ರಾಶಿ ಮಾಡುವುದನ್ನು ಬಿಟ್ಟು, ನಮ್ಮ ರೈತರು ಯಂತ್ರಗಳ ಮೊರೆ ಹೋಗಿ ರಾಶಿ ಕೆಲವೇ ಕ್ಷಣಗಳಲ್ಲಿ ಮುಗಿದು ಬಿಡುತ್ತದೆ. ಈಗಿನ ದಿನಗಳಲ್ಲಿ ಹಂತಿ ರಾಶಿ ವಿರಳಾತಿ ವಿರಳ. ಆದರೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ಹಂತಿ ರಾಶಿ ಮಾಡಲಾಗಿದೆ. ಕನ್ನಡ ಜಾನಪದ ಪರಿಷತ್ ತಾಲೂಕು ಅಧ್ಯಕ್ಷರಾದ ದೇವೇಂದ್ರ ಗೋನಾಳ ಜಮೀನಿನಲ್ಲಿ ಹಂತಿ ರಾಶಿ ಮಾಡಲಾಯಿತು. ರಾಶಿ ಮಾಡುವ ಮುನ್ನ ಗ್ರಾಮದಲ್ಲಿ ಎತ್ತುಗಳ ಮೆರವಣಿಗೆ ಮಾಡಲಾಯಿತು.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More