ಕೆರಗೋಡುವಿನ ಎಲ್ಲ ಮನೆಗಳ ಮೇಲೆ ಹನುಮ ಧ್ವಜ ಹಾರುತ್ತೆ, ಸರ್ಕಾರಕ್ಕೆ ತಾಕತ್ತಿದ್ದರೆ ತಡೆಯಲಿ: ಮಂಡ್ಯ ಬಿಜೆಪಿ ಘಟಕ ಅಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2024 | 11:52 AM

ಹೊರಗಿನಿಂದ ಜನರನ್ನು ಕರೆತರಲಾಗಿತ್ತು ಅಂತ ಸರ್ಕಾರ ಹೇಳುತ್ತಿರುವುದರಲ್ಲಿ ಹುರುಳಿಲ್ಲ, ಹೊರಗಡೆಯಿಂದ ಯಾರೂ ಬಂದಿಲ್ಲ, ಪೊಲೀಸರಿಂದ ಲಾಠಿ ಏಟು ತಿಂದವರೆಲ್ಲ ಸ್ಥಳೀಯರು ಎಂದ ಇಂದ್ರೇಶ್ ಅಪ್ರಾಪ್ತ ಬಾಲಕನೊಬ್ಬನನ್ನು ಪೊಲೀಸರು ವಿಚಾರಣೆ ನಡೆಸಿದ್ದು ಅವನ ತಂದೆತಾಯಿಗಳು ಭಯಭೀತರಾಗಿದ್ದಾರೆ ಅಂತ ಹೇಳಿದರು,

ಮಂಡ್ಯ: ಜಿಲ್ಲೆಯ ಮಂಡ್ಯ ತಾಲ್ಲೂಕಿನಲ್ಲಿರುವ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ (Hanuma flag) ತೆರವುಗೊಳಿಸಿದ ಬಳಿಕ ನಡೆದ ಪೊಲೀಸರ ಲಾಠಿಚಾರ್ಜ್ ನಲ್ಲಿ (lathicharge) ಗಾಯಗೊಂಡವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್ (Indresh) ಇಂದು ಬೆಳಗ್ಗೆ ಮಾತಾಡಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಇಂದ್ರೇಶ್, ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುತ್ತಿದೆಯೇ ಹೊರತು ಬಿಜೆಪಿ ಅಲ್ಲ ಎಂದು ಹೇಳಿದರು. ಕೆರೆಗೋಡು ಗ್ರಾಮಸ್ಥರಿಗೆ ಗಲಾಟೆ ಮಾಡಿ ಅಂತ ಬಿಜೆಪಿ ಹೇಳಿತ್ತಾ ಎಂದು ಪ್ರಶ್ನಿಸಿದ ಅವರು ಹೊರಗಿನಿಂದ ಜನರನ್ನು ಕರೆತರಲಾಗಿತ್ತು ಅಂತ ಸರ್ಕಾರ ಹೇಳುತ್ತಿರುವುದರಲ್ಲಿ ಹುರುಳಿಲ್ಲ, ಹೊರಗಡೆಯಿಂದ ಯಾರೂ ಬಂದಿಲ್ಲ, ಪೊಲೀಸರಿಂದ ಲಾಠಿ ಏಟು ತಿಂದವರೆಲ್ಲ ಸ್ಥಳೀಯರು ಎಂದರು.

ಅಪ್ರಾಪ್ತ ಬಾಲಕನೊಬ್ಬನನ್ನು ಪೊಲೀಸರು ವಿಚಾರಣೆ ನಡೆಸಿದ್ದು ಅವನ ತಂದೆತಾಯಿಗಳು ಭಯಭೀತರಾಗಿದ್ದಾರೆ, ಎಲ್ಲ ಗ್ರಾಮಸ್ಥರ ಮನೆಗಳಿಗೆ ತೆರಳಿ ಅವರನ್ನು ಹೆದರಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ, ಆದರೆ ಅವರ ಬೆದರಿಕೆಗಳಿಗೆ ಯಾರೂ ಹೆದರಲ್ಲ, ಊರವರೆಲ್ಲ ತಮ್ಮ ತಮ್ಮ ಮನೆಗಳ ಮೇಲೆ ಹನುಮ ಧ್ವಜ ಹಾರಿಸುವ ತಯಾರಿ ನಡೆಸಿದ್ದಾರೆ, ತಾಕತ್ತಿದ್ದರೆ ಅವರನ್ನು ತಡೆಯಲಿ ಎಂದು ಇಂದ್ರೇಶ್ ಸರ್ಕಾರಕ್ಕೆ ಸವಾಲೆಸೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.