ಅಂಜನಾದ್ರಿಯಲ್ಲೂ ಲಾರೆನ್ಸ್ ಬಿಷ್ಣೋಯಿ ಫೊಟೋ ಪ್ರತ್ಯಕ್ಷ! ತಾನು ಗ್ಯಾಂಗ್​ಸ್ಟರ್ ಅಭಿಮಾನಿ ಎಂದ ಹನುಮ ಭಕ್ತ

Edited By:

Updated on: Dec 03, 2025 | 1:59 PM

ಕೊಪ್ಪಳದ ಅಂಜನಾದ್ರಿಯಲ್ಲಿ ವಿಚಿತ್ರ ಪ್ರಕರಣವೊಂದು ವರದಿಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಹನುಮ ಮಾಲೆ ಧರಿಸಿ ಬಂದ ಬೆಳಗಾವಿ ಜಿಲ್ಲೆಯ ಭಕ್ತನೊಬ್ಬ ಲಾರೆನ್ಸ್ ಬಿಷ್ಣೋಯಿ ಫೋಟೊ ಹಿಡಿದುಕೊಂಡು ಬಂದಿದ್ದು, ತಾನು ಆತನ ಅಭಿಮಾನಿ ಎಂದು ಹೇಳಿಕೊಂಡಿದ್ದಾನೆ. ಸದ್ಯ ಆ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.

ಕೊಪ್ಪಳ, ಡಿಸೆಂಬರ್ 3: ಅಂಜನಾದ್ರಿಯಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಫೋಟೋ ಹಿಡಿದು ಹನುಮ ಭಕ್ತನೊಬ್ಬ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ್ದಾನೆ. ಬೆಳಗಾವಿ ಜಿಲ್ಲೆ ಕಾನಾಪೂರ ತಾಲೂಕಿನ ಕೋಳಿವಾಡ ಗ್ರಾಮದ ರಾಜು ಎನ್ನುವ ಯುವಕ 9 ದಿನಗಳ ಹನುಮ ಮಾಲೆ ಹಾಕಿಕೊಂಡು ಬಿಷ್ಣೋಯಿ ಫೋಟೋ ಹಿಡಿದು ಬಂದಿರುವುದು ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ. ರಾಜು ತಾನು ಲಾರೆನ್ಸ್ ಬಿಷ್ಣೋಯಿ ಅಭಿಮಾನಿ ಎಂದು ಹೇಳಿಕೊಂಡಿದ್ದು, ‘‘ಲಾರೆನ್ಸ್ ಬಿಷ್ಣೋಯಿಯಿಂದ ದೇಶ ಉಳಿದಿದೆ ಎಂಬ ಮನೋಭಾವ ನಮ್ಮದು’’ ಎಂದು ಹೇಳಿರುವುದು ಚರ್ಚೆಗೆ ಕಾರಣವಾಗಿದೆ. ಹನುಮ ಭಕ್ತನಾಗಿ ಮಾಲೆ ಧರಿಸಿರುವ ಯುವಕ ಗ್ಯಾಂಗ್‌ಸ್ಟರ್‌ನ ಫೋಟೋ ಹಿಡಿದು ಬಂದಿರುವುದು ಅಚ್ಚರಿ ಮತ್ತು ಆತಂಕಕ್ಕೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More