ಶ್ರೀರಂಗಪಟ್ಟಣದಲ್ಲಿ ಸಂಕೀರ್ತನ ಯಾತ್ರೆ: ಜಾಮಿಯಾ ಮಸೀದಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ವಿವೇಕ ಬಿರಾದಾರ

Updated on: Dec 15, 2024 | 10:47 AM

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಸಂಕೀರ್ತನ ಯಾತ್ರೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಕೇಸರಿ ಮಯವಾಗಿದ್ದು, ಪ್ರಮುಖ ರಸ್ತೆ, ಸರ್ಕಲ್​ಗಳಲ್ಲಿ ಕೇಸರಿ ಬಾವುಟ, ಬಂಟಿಂಗ್ಸ್ ರಾರಾಜಿಸುತ್ತಿವೆ. ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಜಾಮಿಯಾ ಮಸೀದಿ ಮುಂದೆ ಸಾಗಲಿದೆ. ಈ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಜಾಮಿಯಾ ಮಸೀದಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಯಾತ್ರೆ ಮುಗಿಯವರೆಗೂ ಜನರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ದಕ್ಷಿಣ ವಲಯ ಡಿಐಜಿ ನೇತೃತ್ವದಲ್ಲಿ ಭದ್ರತೆ ಮಾಡಿಕೊಳ್ಳಲಾಗಿದೆ. ಭದ್ರತೆಗೆ ಮೂವರು ಎಸ್​ಪಿ ಸೇರಿ 1100 ಸಿಬ್ಬಂದಿ ನಿಯೋಜಿಸಲಾಗಿದೆ. ಶ್ರೀರಂಗಪಟ್ಟಣದಲ್ಲಿ 110 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಜಾಮಿಯಾ ಮಸೀದಿ ಸ್ಥಳಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ್ದೇವೆ. ಶ್ರೀರಂಗಪಟ್ಟಣದಲ್ಲಿ ಮದ್ಯಮಾರಾಟವನ್ನೂ ನಿಷೇಧ ಮಾಡಲಾಗಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.