ಬಿಗ್ ಬಾಸ್​ನಲ್ಲಿ ಹನುಮಂತ ಸ್ಪರ್ಧಿಯೇ ಅಲ್ಲ? ಹಾಗಾದ್ರೆ ಮತ್ತಿನ್ನೇನು?

Updated on: Oct 26, 2024 | 9:29 PM

ಯೋಗರಾಜ್ ಭಟ್ ಅವರು ರಿಯಾಲಿಟಿ ಶೋ ಮೂಲಕ ಗಮನ ಸೆಳೆದವರು. ಅವರು ಈಗ ಸ್ಪರ್ಧಿಯೇ ಅಲ್ಲ ಎಂದು ಹೇಳಿದ್ದಾರೆ ಯೋಗರಾಜ್ ಭಟ್. ಅದಕ್ಕೂ ಒಂದು ಕಾರಣ ಇದೆ.

‘ಕಿಚ್ಚ’ ಸುದಿಪ್ ಅವರು ವೀಕೆಂಡ್​ನಲ್ಲಿ ಬಿಗ್ ಬಾಸ್​ಗೆ ಬಂದಿಲ್ಲ. ಇದು ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಸುದೀಪ್ ಬರದೇ ಇದ್ದರೂ ವೀಕೆಂಡ್​ನಲ್ಲಿ ಮನರಂಜನೆಗೆ ಕೊರತೆ ಆಗದಂತೆ ನೋಡಿಕೊಳ್ಳುವಲ್ಲಿ ಕಲರ್ಸ್ ಕನ್ನಡ ವಾಹಿನಿ ಪ್ರಯತ್ನಿಸಿದೆ. ಬಿಗ್ ಬಾಸ್ ಮನೆಗೆ ನಿರ್ದೇಶಕ ಯೋಗರಾಜ್ ಭಟ್ ಬಂದಿದ್ದಾರೆ. ಅವರು ಹನುಮಂತ ಅವರ ಕಾಲೆಳೆದಿದ್ದಾರೆ. ‘ನೀವು ಸ್ಪರ್ಧಿಯೋ ಅಥವಾ ವೀಕ್ಷಕನಾ’ ಎಂದು ಪ್ರಶ್ನೆ ಮಾಡಿದ್ದಾರೆ. ಹನುಮಂತ ಮನೆಯಲ್ಲಿ ನಡೆಯುವ ಯಾವುದೇ ಚರ್ಚೆಯಲ್ಲಿ ತಲೆ ಹಾಕಲ್ಲ. ಅದಕ್ಕೆ ಈ ಪ್ರಶ್ನೆ ಕೇಳಿದ್ದಾರೆ ಯೋಗರಾಜ್ ಭಟ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More