ಹನುಮಂತಗೆ ಈ ವ್ಯಕ್ತಿಯನ್ನು ಭೇಟಿ ಆಗುವ ಬಯಕೆ; ಈಡೇರುತ್ತಾ ಆಸೆ?

Updated on: Jan 28, 2025 | 8:22 AM

‘ಬಿಗ್ ಬಾಸ್​’ ಪೂರ್ಣಗೊಂಡರೂ ಅದರ ಬಗ್ಗೆ ಇರುವ ಚರ್ಚೆಗಳು ನಿಂತಿಲ್ಲ. ಹನುಮಂತ ಅವರು ದೊಡ್ಮನೆಯ ವಿನ್ನರ್ ಎನಿಸಿಕೊಂಡಿದ್ದಾರೆ. ಈಗ ಅವರ ಬಗ್ಗೆ ವಿಡಿಯೋ ಒಂದು ವೈರಲ್ ಆಗಿದೆ. ಇದರಲ್ಲಿ ಅವರು ಒಂದು ಮಹದಾಸೆಯನ್ನು ವ್ಯಕ್ತಪಡಿಸಿದ್ದಾರೆ. ಅದೇನು? ಅವರ ಆಸೆ ಏನು ಎಂಬ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಪೂರ್ಣಗೊಂಡಿದ್ದು, ಹನುಮಂತ ಅವರು ವಿನ್ ಆಗಿದ್ದಾರೆ. ಈಗ ಹನುಮಂತ, ತ್ರಿವಿಕ್ರಂ ಹಾಗೂ ರಜತ್ ಅವರು ಬಿಗ್ ಬಾಸ್​ಗೆ ಸಂಬಂಧಿಸಿದಂತೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಬಿಗ್ ಬಾಸ್​ ಆದೇಶ ನೀಡುವ ವ್ಯಕ್ತಿಯನ್ನು ಭೇಟಿ ಮಾಡಬೇಕು’ ಎಂದು ಅವರು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More