AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚ್ಚಾಟನೆಯಿಂದ ಬಹಳ ಸಂತೋಷವಾಗಿದೆ, ಪಕ್ಷದ ಕ್ರಮವನ್ನು ಸ್ವಾಗತಿಸುತ್ತೇನೆ: ಎಸ್ ಟಿ ಸೋಮಶೇಖರ್

ಉಚ್ಚಾಟನೆಯಿಂದ ಬಹಳ ಸಂತೋಷವಾಗಿದೆ, ಪಕ್ಷದ ಕ್ರಮವನ್ನು ಸ್ವಾಗತಿಸುತ್ತೇನೆ: ಎಸ್ ಟಿ ಸೋಮಶೇಖರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 27, 2025 | 4:56 PM

Share

ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಣಯದಿಂದ ಬಹಳ ಸಂತೋಷವಾಗಿದೆ, ಅದನ್ನು ಸ್ವಾಗತಿಸುತ್ತೇನೆ, ಇಂಥದೊಂದು ನಿರ್ಧಾರವನ್ನು ವರಿಷ್ಠರು ತೆಗೆದುಕೊಳ್ಳುತ್ತಾರೆ ಅಂತ ಗೊತ್ತಿತ್ತು, ಅದರೆ ಯಾವಾಗ ಅದು ಹೊರಬೀಳಬಹುದು ಎಂಬ ಕುತೂಹಲ ಮಾತ್ರ ಇತ್ತು, ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಅದರಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಸೋಮಶೇಖರ್ ಹೇಳಿದರು.

ಬೆಂಗಳೂರು, ಮೇ 27: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್, ವರಿಷ್ಠರ ನಿರ್ಧಾರ ತನ್ನಲ್ಲಿ ಆಶ್ಚರ್ಯವನ್ನೇನೂ ಹುಟ್ಟಿಸಿಲ್ಲ, ಕ್ರಮ ನಿರೀಕ್ಷಿಸಲಾಗಿತ್ತು ಎಂದು ಹೇಳಿದರು. ನಗರದಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿರುವ ಸೋಮಶೇಖರ್, ಶಿಸ್ತು ಸಮಿತಿಯಿಂದ (disciplinary committee) ತನಗೆ ನೋಟೀಸ್ ಜಾರಿಯಾಗಿದ್ದು ನಿಜ, ತಾನು ನೀಡಿದ ಉತ್ತರದಲ್ಲಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಲ್ಲ ಮತ್ತು ಪಕ್ಷಕ್ಕೆ ಮುಜುಗುರ ಉಂಟಾಗುವ ರೀತಿಯಲ್ಲಿ ನಡೆದುಕೊಂಡಿಲ್ಲ, ಅಂತ ಹೇಳಿದ್ದೆ. ಶಿಸ್ತು ಸಮಿತಿಯು ಸ್ಥಳೀಯ ನಾಯಕತ್ವ ಹೇಳುವುದಕ್ಕೆ ಹೆಚ್ಚಿನ ಬೆಲೆ ನೀಡುತ್ತದೆ ಎಂದು ಹೇಳಿದರು. ಮುಂದಿನ ನಡೆ ಬಗ್ಗೆ ಯೋಚಿಸಿಲ್ಲ, ಚುನಾವಣೆಗೆ ಇನ್ನೂ 3 ವರ್ಷ ಸಮಯವಿದೆ, ಬೆಂಬಲಿಗರು ಹೇಳಿದ್ದನ್ನು ಕೇಳುತ್ತೇನೆ ಎಂದು ಸೋಮಶೆಖರ್ ಹೇಳಿದರು.

ಇದನ್ನೂ ಓದಿ:   ಅವರಿಬ್ಬರು ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರಲಿಲ್ಲ ಅಲ್ವಾ? ಹೆಬ್ಬಾರ್, ಸೋಮಶೇಖರ್ ಉಚ್ಚಾಟನೆಗೆ ಹೀಗ್ಯಾಕಂದ್ರು ಡಿಕೆಶಿ…

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.