ವರಿಷ್ಠರು ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿಭಾಯಿಸುವೆ: ರಾಜಾ ವೆಂಕಟಪ್ಪ ನಾಯಕ್

ಅರುಣ್​ ಕುಮಾರ್​ ಬೆಳ್ಳಿ

Updated on: Jan 27, 2024 | 10:42 AM

ಎಲ್ಲ 135 ಶಾಸಕರಿಗೆ ಸ್ಥಾನಗಳನ್ನು ನೀಡುವುದು ಸಾಧ್ಯವಿಲ್ಲ, ತನ್ನಂತೆ ನಾಲ್ಕೈದು ಬಾರಿ ಆಯ್ಕೆಯಾಗಿರುವವರು ಸಾಕಷ್ಟು ಜನರಿದ್ದಾರೆ, ಹಾಗಾಗಿ ವರಿಷ್ಠರು ನೀಡಿರುವ ಜವಾಬ್ದಾರಿಯ ಬಗ್ಗೆ ತೃಪ್ತಿ ಇದೆ ಅದನ್ನು ಪ್ರಾಮಾಣಿಕತೆ ಮತ್ತು ಮುತುವರ್ಜಿಯಿಂದ ನಿಭಾಯಿಸುವುದಾಗಿ ಶಾಸಕ ನಾಯಕ್ ಹೇಳಿದರು.

ಯಾದಗಿರಿ: ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಯನ್ನು ಸಿದ್ದರಾಮಯ್ಯ ಸರ್ಕಾರ (Siddaramaiah government) ಬಿಡುಗಡೆ ಮಾಡಿದ್ದು ಜಿಲ್ಲೆಯ ಸುರಪುರ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ್ (Raja Venkatappa Nayak) ಉಗ್ರಾಣ ನಿಗಮದ (State warehousing Corporation) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಟಿವಿ9 ವಾಹಿನಿಯ ಯಾದಗಿರಿ ವರದಿಗಾರನೊಂದಿಗೆ ಮಾತಾಡಿರುವ ಶಾಸಕ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಉಗ್ರಾಣ ನಿಗಮದ ಜವಾಬ್ದಾರಿ ತನಗೆ ನೀಡಿರುವುದಕ್ಕೆ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕೃತಜ್ಞತೆ ಸಲ್ಲಿಸಿದರು. ಸಚಿವ ಸ್ಥಾನಕ್ಕೆ ಸಿಗದಿರುವುದಕ್ಕೆ ಅಸಮಾಧಾನವೇನೂ ಇಲ್ಲ ಎಂದ ಶಾಸಕ ಎಲ್ಲ 135 ಶಾಸಕರಿಗೆ ಸ್ಥಾನಗಳನ್ನು ನೀಡುವುದು ಸಾಧ್ಯವಿಲ್ಲ, ತನ್ನಂತೆ ನಾಲ್ಕೈದು ಬಾರಿ ಆಯ್ಕೆಯಾಗಿರುವವರು ಸಾಕಷ್ಟು ಜನರಿದ್ದಾರೆ, ಹಾಗಾಗಿ ವರಿಷ್ಠರು ನೀಡಿರುವ ಜವಾಬ್ದಾರಿಯ ಬಗ್ಗೆ ತೃಪ್ತಿ ಇದೆ ಅದನ್ನು ಪ್ರಾಮಾಣಿಕತೆ ಮತ್ತು ಮುತುವರ್ಜಿಯಿಂದ ನಿಭಾಯಿಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.