Bengaluru: ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯನವರು (Siddaramaiah) ಬೆಂಗಳೂರಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಹಿಂದುಳಿದ ವರ್ಗಗಳ ವಕೀಲರ ಸಂಘವನ್ನು (lawyer’s association) ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿತ್ತು. ಮಾಜಿ ಮುಖ್ಯಮಂತ್ರಿಗಳು ದೀಪ ಹೊತ್ತಿಸಿ ಸಂಘವನ್ನು ಉದ್ಘಾಟಿಸುವಾಗ ಸಂಘದ ಪದಾಧಿಕಾರಿಗಳು (office-bearers) ವೇದಿಕೆ ಮೇಲೆ ನೆರೆದಿದ್ದರು. ಈ ಸಂದರ್ಭದಲ್ಲಿ ಮಾತಾಡಿದ ಸಿದ್ದರಾರಮಯ್ಯನವರು ಹಿಂದುಳಿದ ವರ್ಗಗಳಿಗೆ ಸೇರಿದ ಅನೇಕ ಯುವಕರು ವಕೀಲ ವೃತ್ತಿ ಆರಿಸಿಕೊಳ್ಳುತ್ತಿರುವುದು ತಮಗೆ ಬಹಳ ಸಂತೋಷ ನೀಡಿದೆ ಅಂತ ಹೇಳಿದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.