ಕೋಲಾರ: ಮಧ್ಯಾಹ್ನ ಮದುವೆ ರಾತ್ರಿ ನೇಣಿಗೆ ಕೊರಳೊಡ್ಡಿ ಸಾವು; ಹರೀಶ್ ಸತ್ತಿದ್ದು ಯಾಕೆಂದು ಯಾರಿಗೂ ಗೊತ್ತಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Jul 03, 2025 | 6:11 PM

ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ನಿವಾಸಿಯಾಗಿದ್ದ ಹರೀಶ್ ನೇಣಿಗೆ ಕೊರಳೊಡ್ಡುವ ಮೊದಲು ಬಹಳಷ್ಟು ಮದ್ಯ ಸೇವಿಸಿದ್ದರು. ಹರೀಶ್ ಕಳೆದ ಮೂರು ದಿನಗಳಿಂದ ಕೆಲಸಕ್ಕೆ ಬಂದಿರಲಿಲ್ಲ, ಅವರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದು ಗೊತ್ತಿಲ್ಲ, ಮದುವೆಯಾಗುತ್ತಿರುವ ವಿಷಯವನ್ನು ಅಸ್ಪತ್ರೆ ಸಿಬ್ಬಂದಿಯ ಪೈಕಿ ಯಾರಿಗೂ ಮಾಹಿತಿ ಇರಲಿಲ್ಲ ಎಂದು ಡಾ ಜಗದೀಶ್ ಹೇಳುತ್ತಾರೆ.

ಕೋಲಾರ, ಜುಲೈ 3: ಜನ ಪ್ರಾಣ ಉಳಿಸಿಕೊಳ್ಳಲು ಆಸ್ಪತ್ರೆಗೆ ಬರುತ್ತಾರೆ, ಆದರೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟ್ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಹರೀಶ್ ಬಾಬು (33)  (Harish Babu) ಆಸ್ಪತ್ರೆಯ ಇಎನ್​ಟಿ ವಿಭಾಗದ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಾಬರಿಗೀಡು ಮಾಡುವ ಮತ್ತೊಂದು ಅಂಶವೆಂದರೆ, ನಿನ್ನೆಯಷ್ಟೇ ಮದುವಯಾಗಿದ್ದರು ಮತ್ತು ಅವರನ್ನು ಮದುವೆಯಾದ ಯುವತಿ ಸಹ ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಾರೆ. ಮಾಧ್ಯಮಗಳೊಂದಿಗೆ ಮಾತಾಡಿರುವ ವೈದ್ಯಾಧಿಕಾರಿ ಡಾ ಜಗದೀಶ್ ಪ್ರಕಾರ ಹರೀಶ್ ಉತ್ತಮ ಕೆಲಸಗಾರರಾಗಿದ್ದರು.

ಇದನ್ನೂ ಓದಿ:    ತೆಲಂಗಾಣ: ನ್ಯಾಯಾಲಯದ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ, ಮಹಿಳೆ ಸಾವು

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.