‘ಪದ್ಮಶ್ರೀ’ ಪ್ರಶಸ್ತಿ ಸ್ವೀಕರಿಸಿದ ಹರ್ಮನ್ಪ್ರೀತ್ ಕೌರ್
ಈ ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ಹರ್ಮನ್ಪ್ರೀತ್ ಕೌರ್ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಣ ಟಿ20 ಸರಣಿಯು ಮೇ 28 ರಿಂದ ಶುರುವಾಗಲಿದ್ದು, ಈ ಸರಣಿಗಾಗಿ ಅವರು ಲಂಡನ್ಗೆ ತೆರಳಿದ್ದಾರೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಮಹಿಳಾ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದೆ. ಈ ವಿಶ್ವಕಪ್ ಜೂನ್ 12 ರಿಂದ ಶುರುವಾಗಲಿದೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 25, 2026 ರಂದು ನಡೆದ ನಾಗರಿಕ ಹೂಡಿಕೆ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹರ್ಮನ್ಪ್ರೀತ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಭಾರತೀಯ ಮಹಿಳಾ ಕ್ರಿಕೆಟ್ಗೆ ಅವರು ನೀಡಿದ ಅಪ್ರತಿಮ ಕೊಡುಗೆ ಮತ್ತು ಅವರ ನೇತೃತ್ವದಲ್ಲಿ ಭಾರತ ತಂಡ ಸಾಧಿಸಿದ ಐತಿಹಾಸಿಕ ಯಶಸ್ಸನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ.
ಈ ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ಹರ್ಮನ್ಪ್ರೀತ್ ಕೌರ್ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ. ಏಕೆಂದರೆ ಭಾರತ ಮತ್ತು ಇಂಗ್ಲೆಂಡ್ ಮಹಿಳಾ ತಂಡಗಳ ನಡುವಣ ಟಿ20 ಸರಣಿಯು ಮೇ 28 ರಿಂದ ಶುರುವಾಗಲಿದ್ದು, ಈ ಸರಣಿಗಾಗಿ ಅವರು ಲಂಡನ್ಗೆ ತೆರಳಿದ್ದಾರೆ. ಈ ಸರಣಿಯ ಬಳಿಕ ಟೀಮ್ ಇಂಡಿಯಾ ಮಹಿಳಾ ಟಿ20 ವಿಶ್ವಕಪ್ನಲ್ಲಿ ಕಣಕ್ಕಿಳಿಯಲಿದೆ. ಈ ವಿಶ್ವಕಪ್ ಜೂನ್ 12 ರಿಂದ ಶುರುವಾಗಲಿದೆ.
Follow Us