AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ಹರ್ಷ ಬಿಜೆಪಿ ಸೇರಿದ್ದು ಆಶ್ಚರ್ಯ ತಂದಿಲ್ಲ, ಮೊದಲಿಂದಲೂ ಅವರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು: ಸಂಯುಕ್ತಾ ಪಾಟೀಲ್

ಅಣ್ಣ ಹರ್ಷ ಬಿಜೆಪಿ ಸೇರಿದ್ದು ಆಶ್ಚರ್ಯ ತಂದಿಲ್ಲ, ಮೊದಲಿಂದಲೂ ಅವರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು: ಸಂಯುಕ್ತಾ ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 06, 2024 | 1:10 PM

Share

ಕುಟುಂಬಕ್ಕಾಗಲಿ ಪಕ್ಷಕ್ಕಾಗಲಿ ಮುಜುಗುರ ಉಂಟಾಗುವ ಸ್ಥಿತಿಯೇನೂ ನಿರ್ಮಾಣವಾಗಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ನಮಗೆ ಇಷ್ಟವಾಗುವ ಪಕ್ಷವನ್ನು ಆಯ್ಕೆಮಾಡಿಕೊಳ್ಳುವ ಮತ್ತು ನಿಷ್ಠೆ ಪ್ರದರ್ಶಿಸುವ ಸ್ವಾತಂತ್ರ್ಯ ಮತ್ತು ಹಕ್ಕಿದೆ ಎಂದು ಸಂಯುಕ್ತಾ ಹೇಳಿದರು. ಆದರೆ ಗಮನಿಸಬೇಕಾದ ಸಂಗತಿಯೇನೆಂದರೆ ಹರ್ಷಗೌಡ ಅವರ ತಂದೆ ಮತ್ತು ಸಂಯುಕ್ತಾ ದೊಡ್ಡಪ್ಪ ಶಿವಶರಣಗೌಡ ಪಾಟೀಲ್ ಸಂಯುಕ್ತಾ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

ಬಾಗಲಕೋಟೆ: ತನ್ನ ಕಸಿನ್ ಹರ್ಷಗೌಡ ಪಾಟೀಲ್ (Harsha Gouda Patil) ನಿನ್ನೆ ಬಿಜೆಪಿ ಸೇರಿದ್ದು ಜನರಿಗೆ ಮತ್ತು ಮಾಧ್ಯಮಗಳಿಗೆ ಹೊಸ ವಿಷಯ ಅನಿಸಬಹುದು ಆದರೆ ಅವರು ಬಹಳ ವರ್ಷಗಳಿಂದ ಪಕ್ಷದ ಜೊತೆ ಗುರುತಿಸಿಕೊಂಡಿದ್ದರು ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ (Samyukta Patil) ಹೇಳಿದರು. ಕ್ಷೇತ್ರದಲ್ಲಿ ಇಂದು ಪಕ್ಷದ ಕಾರ್ಯಕರ್ತರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ಬಾಗಲಕೋಟೆ ಟವಿ9 ವರದಿಗಾರನೊಂದಿಗೆ ಮಾತಾಡಿದ ಅವರು, ಅಣ್ಣ ಹರ್ಷಗೌಡ ಪಾಟೀಲ್ ಅವರು ಸೋಶಿಯಲ್ ಮೀಡಿಯ ಪೋಸ್ಟ್ ಗಳನ್ನು (social media posts) ನೋಡಿದರೆ ಗೊತ್ತಾಗುತ್ತದೆ. ಅವರು ಕೇವಲ ಬಿಜೆಪಿ ನಾಯಕರು ಮತ್ತು ಪಕ್ಷದ ಪರವಾದ ಪೋಸ್ಟರ್ ಗಳನ್ನು ಶೇರ್ ಮಾಡಿದ್ದಾರೆ, ಅವರು ಬಿಜೆಪಿ ಸೇರಿರುವುದು ತಮ್ಮ ಕುಟುಂಬಕ್ಕೆ ಆಸ್ಚರ್ಯವೇನೂ ತಂದಿಲ್ಲ, ಬಿಜೆಪಿ ನಾಯಕರ ಜೊತೆ ಒಡನಾಟವಿಟ್ಟುಕೊಂಡಿದ್ದು ಗೊತ್ತಿತ್ತು ಎಂದರು. ಕುಟುಂಬಕ್ಕಾಗಲಿ ಪಕ್ಷಕ್ಕಾಗಲಿ ಮುಜುಗುರ ಉಂಟಾಗುವ ಸ್ಥಿತಿಯೇನೂ ನಿರ್ಮಾಣವಾಗಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ನಮಗೆ ಇಷ್ಟವಾಗುವ ಪಕ್ಷವನ್ನು ಆಯ್ಕೆಮಾಡಿಕೊಳ್ಳುವ ಮತ್ತು ನಿಷ್ಠೆ ಪ್ರದರ್ಶಿಸುವ ಸ್ವಾತಂತ್ರ್ಯ ಮತ್ತು ಹಕ್ಕಿದೆ ಎಂದು ಹೇಳಿದರು. ಆದರೆ ಗಮನಿಸಬೇಕಾದ ಸಂಗತಿಯೇನೆಂದರೆ ಹರ್ಷಗೌಡ ಅವರ ತಂದೆ ಮತ್ತು ಸಂಯುಕ್ತಾ ದೊಡ್ಡಪ್ಪ ಶಿವಶರಣಗೌಡ ಪಾಟೀಲ್ ಸಂಯುಕ್ತಾ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಂಯುಕ್ತಾ ಪಾಟೀಲ್ ಪರ ಪ್ರಚಾರಕ್ಕೆ ಹೋಗುತ್ತಿಲ್ಲ, ಪತಿ ಹೇಳಿದ್ದು ಸಹ ಸುಳ್ಳು: ವೀಣಾ ಕಾಶಪ್ಪನವರ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.