ಪ್ರಲ್ಹಾದ್ ಜೋಶಿ ಭೇಟಿಯಾಗಿ ಹಲ್ಲೆ ಘಟನೆ ಬಗ್ಗೆ ವಿವರಿಸಿದ ಹರ್ಷಿಕಾ, ಭುವನ್
ಹರ್ಷಿಕಾ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ಅವರು ಹುಬ್ಬಳಿಗೆ ತೆರಳಿ ಪ್ರಲ್ಹಾದ್ ಜೋಶಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಲ್ಲಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಯತ್ನದ ಬಗ್ಗೆ ಈ ದಂಪತಿ ವಿವರಿಸಿದ್ದಾರೆ. ಲೋಕಸಭಾ ಚುನಾವಣೆ ಮುಗಿದ ನಂತರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಪ್ರಲ್ಹಾದ್ ಜೋಶಿ ಅವರು ಭರವಸೆ ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ಇಲ್ಲಿದೆ..
ಕನ್ನಡದ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ನಟ ಭುವನ್ ಪೊನ್ನಣ್ಣ ಅವರ ಮೇಲೆ ಬೆಂಗಳೂರಿನಲ್ಲಿ ಇತ್ತೀಚೆಗೆ ಹಲ್ಲೆ ಪ್ರಯತ್ನ ನಡೆದಿತ್ತು. ಆ ಘಟನೆಗೆ ಸಂಬಂಧಿಸಿದಂತೆ ಸಂಸದ ಪ್ರಲ್ಹಾದ್ ಜೋಶಿ ಅವರಿಗೆ ಹರ್ಷಿಕಾ ಮತ್ತು ಭುವನ್ ಮಾಹಿತಿ ನೀಡಿದ್ದಾರೆ. ಇಂದು (ಏಪ್ರಿಲ್ 24) ಹುಬ್ಬಳ್ಳಿಯಲ್ಲಿ ಪ್ರಲ್ಹಾದ್ ಜೋಶಿ ಅವರ ನಿವಾಸಕ್ಕೆ ಹರ್ಷಿಕಾ-ಭುವನ್ ಭೇಟಿ ನೀಡಿದ್ದಾರೆ. ಅಂದು ನಡೆದ ಘಟನೆ ಏನು ಎಂಬುದನ್ನು ವಿವರಿಸಿದ್ದಾರೆ. ಕನ್ನಡದಲ್ಲಿ ಮಾತನಾಡಿದ್ದಕ್ಕೆ ಅಲ್ಲಿನ ಜನರು ತಮ್ಮ ಮೇಲೆ ಸಿಟ್ಟಾಗಿದ್ದರು ಎಂಬುದನ್ನು ಹರ್ಷಿಕಾ ತಿಳಿಸಿದ್ದಾರೆ. ಭುವನ್ (Bhuvan Ponnanna) ಧರಿಸಿದ್ದ ಚೈನ್ ಕಸಿಯುವ ಪ್ರಯತ್ನ ಕೂಡ ಅಂದು ನಡೆದಿತ್ತು. ಆ ಘಟನೆಯ ಪೂರ್ತಿ ವಿವರವನ್ನು ಪ್ರಹ್ಲಾದ್ ಜೋಶಿ ಅವರಿಗೆ ಈ ದಂಪತಿ ತಿಳಿಸಿದ್ದಾರೆ. ‘ಈ ರೀತಿ ಆಗಬಾರದ ಸರ್. ಇದು ತುಂಬಾ ಕೆಟ್ಟ ಟ್ರೆಂಡ್. ಸಾರ್ವಜನಿಕ ಕ್ಷೇತ್ರದಲ್ಲಿ ಇರುವ ನಮಗೇ ಈ ರೀತಿ ಆದರೆ ಸಾಮಾನ್ಯ ಜನರ ಗತಿ ಏನು. ನಾವು ಅವರ ಏರಿಯಾದಲ್ಲಿ ಹೋಗುತ್ತಿದ್ದರೆ ಸ್ಕೂಟರ್ನಲ್ಲಿ ಅಡ್ಡ ಹಾಕುತ್ತಾರೆ. ಬೇಕು ಅಂತಲೇ ಆ ರೀತಿ ಮಾಡುತ್ತಾರೆ’ ಎಂದು ಭುವನ್ ಕಳವಳ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಪ್ರಲ್ಹಾದ್ ಜೋಶಿ ಭರವಸೆ ನೀಡಿದ್ದಾರೆ. ‘ನಾನು ಕಮಿಷನರ್ ಜೊತೆ ಈ ಬಗ್ಗೆ ಮಾತನಾಡುತ್ತೇನೆ. ನಾವು ನಿಮ್ಮ ಜೊತೆ ಇದ್ದೇವೆ. ಚುನಾವಣೆ ಮುಗಿದ ಬಳಿಕ ಈ ವಿಷಯವನ್ನು ನಾವು ತುಂಬ ಗಂಭೀರವಾಗಿ ಪರಿಗಣಿಸುತ್ತೇವೆ’ ಎಂದು ಪ್ರಲ್ಹಾದ್ ಜೋಶಿ (Pralhad Joshi) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

