‘ಇದು ದರೋಡೆ ಪ್ಲ್ಯಾನ್​’: ಬೆಂಗಳೂರಿನಲ್ಲಿ ನಡೆದ ಹಲ್ಲೆ ಬಗ್ಗೆ ವಿವರ ನೀಡಿದ ಹರ್ಷಿಕಾ

‘ಅಲ್ಲಿ ಇದ್ದವರು ಯಾರು ಅಂತ ನಮಗೆ ಗೊತ್ತಿಲ್ಲ. ಚೈನ್​ ಎಳೆಯಲು ಬಂದಾಗ ಅವರು ಕಳ್ಳರು ಎಂಬುದು ಗೊತ್ತಾಯಿತು. ಪ್ಲ್ಯಾನ್​ ಮಾಡಿ ಈ ಕೆಲಸ ಮಾಡ್ತಾರೆ. ಗುಂಪಲ್ಲಿ ಬಂದು, ಕಳ್ಳತನ ಮಾಡಿ ಹಾಗೇ ಹೋಗಿಬಿಡುತ್ತಾರೆ. ಆ ಪರಿಸ್ಥಿತಿಯಲ್ಲಿ ಯಾರಿಗೂ ಏನೂ ಗೊತ್ತಾಗುವುದಿಲ್ಲ’ ಎಂದು ಹರ್ಷಿಕಾ ಪೂಣಚ್ಚ ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ಮೇಲೆ ನಡೆದ ಹಲ್ಲೆ ಬಗ್ಗೆ ಅವರು ವಿವರ ನೀಡಿದ್ದಾರೆ.

‘ಇದು ದರೋಡೆ ಪ್ಲ್ಯಾನ್​’: ಬೆಂಗಳೂರಿನಲ್ಲಿ ನಡೆದ ಹಲ್ಲೆ ಬಗ್ಗೆ ವಿವರ ನೀಡಿದ ಹರ್ಷಿಕಾ
| Updated By: ಮದನ್​ ಕುಮಾರ್​

Updated on: Apr 19, 2024 | 8:27 PM

ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ನಟ ಭುವನ್ ಪೊನ್ನಣ್ಣ ಅವರು ತಮ್ಮ ಕುಟುಂಬದವರ ಜೊತೆ ಬೆಂಗಳೂರಿನ ರೆಸ್ಟೋರೆಂಟ್​ವೊಂದಕ್ಕೆ ತೆರಳಿದ್ದಾಗ ಅವರ ಮೇಲೆ ಹಲ್ಲೆ (Assault) ಮಾಡಲಾಗಿದೆ. ಆ ಘಟನೆಯ ಬಗ್ಗೆ ಹರ್ಷಿಕಾ ಪೂಣಚ್ಚ ಅವರು ಸೋಶಿಯಲ್​ ಮೀಡಿಯಾದಲ್ಲಿ ದೀರ್ಘ ಪೋಸ್ಟ್​ ಮಾಡಿದ್ದಾರೆ. ಅಲ್ಲದೇ ‘ಟಿವಿ9 ಕನ್ನಡ’ಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದು, ಘಟನೆಯ ಬಗ್ಗೆ ಎಳೆಎಳೆಯಾಗಿ ಮಾಹಿತಿ ನೀಡಿದ್ದಾರೆ. ಏಪ್ರಿಲ್​ 2ರಂದು ಈ ಘಟನೆ ನಡೆದಿತ್ತು. ಅದರ ಬಗ್ಗೆ ಹರ್ಷಿಕಾ ಈಗ ಮಾತನಾಡಿದ್ದಾರೆ. ‘ನಮಗೆ ಆ ರೆಸ್ಟೋರೆಂಟ್​ ಇಷ್ಟ. ಹಾಗಾಗಿ ಅಲ್ಲಿಗೆ ಹೋಗಿದ್ವಿ. ಕಾರು ತೆಗೆಯುವಾಗ ಕೆಲವರು ಜಗಳ ಶುರು ಮಾಡಿದರು. ಕಾಲರ್​ ಹಿಡಿದುಕೊಂಡು ಹಲ್ಲೆಗೆ ಮುಂದಾದರು. ಭುವನ್ ಧರಿಸಿದ ಚೈನ್​ ಕಟ್​ ಆಯಿತು. ಆ ಶಾಕ್​ನಲ್ಲಿ ನಮಗೆ ಗೊತ್ತಾಗುತ್ತಿರಲಿಲ್ಲ. ಪ್ಲ್ಯಾನ್​ ಮಾಡಿಕೊಂಡು ನಡೆಸಿದ ದರೋಡೆ ಇದು. ಒಂದು ಗುಂಪಿನಲ್ಲಿ ಏನಾಗುತ್ತದೆ ಅಂತ ಊಹಿಸೋಕೆ ಆಗಲ್ಲ. ನಮಗೆ ಈ ರೀತಿ ಆಗುತ್ತಿರುವಾಗ ಸಾಮಾನ್ಯ ಜನರಿಗೆ, ಬಡವರಿಗೆ ಏನೆಲ್ಲ ತೊಂದರೆ ಆಗಿರಬಹುದು? ಜನರಲ್ಲಿ ಜಾಗೃತಿ ಮೂಡಲಿ ಎಂಬ ಉದ್ದೇಶದಿಂದ ನಾನು ಸೋಶಿಯಲ್​ ಮೀಡಿಯಾದಲ್ಲಿ ಇದನ್ನು ಪೋಸ್ಟ್​ ಮಾಡಿದ್ದೇನೆ. ಕಾನೂನಿನ ಹೋರಾಟದ ಬಗ್ಗೆ ಭುವನ್(Bhuvan Ponnanna) ಜೊತೆ ಮಾತನಾಡುತ್ತೇನೆ. ಒಂದು ನಿರ್ಧಾರಕ್ಕೆ ಬರುತ್ತೇವೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ