Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿಯಾಣ ಅಸೆಂಬ್ಲಿ ಪೋಲ್ ಫಲಿತಾಂಶ ಮೋದಿಯವರ ಮೇಲೆ ಜನರ ವಿಶ್ವಾಸದ ಪ್ರತೀಕ: ಜಗದೀಶ್ ಶೆಟ್ಟರ್

ಹರಿಯಾಣ ಅಸೆಂಬ್ಲಿ ಪೋಲ್ ಫಲಿತಾಂಶ ಮೋದಿಯವರ ಮೇಲೆ ಜನರ ವಿಶ್ವಾಸದ ಪ್ರತೀಕ: ಜಗದೀಶ್ ಶೆಟ್ಟರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 08, 2024 | 6:50 PM

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ, ಈ ಸರ್ಕಾರದಲ್ಲಿ ನಡೆದಷ್ಟು ದೊಡ್ಟ ಹಗರಣಗಳು ಬೇರೆ ಯಾವುದೇ ಸರ್ಕಾರದಲ್ಲಿ ನಡೆದಿಲ್ಲ, ಒಂದು ವೇಳೆ ಈಗೇನಾದರೂ ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ನಡೆದರೆ ಬಿಜೆಪಿ ಅನಾಯಾಸವಾಗಿ ಗೆಲ್ಲಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಬೆಳಗಾವಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಿಕ್ಕ ಗೆಲುವು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮೇಲೆ ಜನ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸದ ಪ್ರತೀಕವಾಗಿದೆ, ಮುಂಬರಲಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲೂ ಮೋದಿಯವರ ಮ್ಯಾಜಿಕ್ ನಡೆಯಲಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹರಿಯಾಣಾ ವಿಧಾನಸಭೆ ಫಲಿತಾಂಶ- ಮುಡಾ ಹಗರಣಕ್ಕೆ ತಿರುವು, ಸಿದ್ದುಗೆ ಸಂಕಷ್ಟ