ಹಾಸನ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ: ಕೆಂಡ ಹಾಯ್ದು ಭಕ್ತಿ ಮೆರೆದ ಜಿಲ್ಲಾಧಿಕಾರಿ ಲತಾ ಕುಮಾರಿ

Edited By:

Updated on: Oct 23, 2025 | 10:50 AM

ಹಾಸನದ ಹಾಸನಾಂಬ ದರ್ಶನ ಇಂದು ಕೊನೆಯಾಗುತ್ತಿದೆ. ಹಾಸನಾಂಬ ದರ್ಶನ ಹಾಗೂ ಸಿದ್ದೇಶ್ವರ ಸ್ವಾಮಿ ರಥೋತ್ಸವ, ಕೆಂಡೋತ್ಸವ ಗುರುವಾರ ಸಂಭ್ರಮದಿಂದ ಜರುಗಿತು. ಇದೇ ವೇಳೆ ಜಿಲ್ಲಾಧಿಕಾರಿ ಲತಾ ಕುಮಾರಿ ಕೂಡ ಕೆಂಡ ಹಾಯ್ದು ಭಕ್ತಿ ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಲತಾ ಕುಮಾರಿ ಕೆಂಡ ಹಾಯ್ದ ವಿಡಿಯೋ ಇಲ್ಲಿದೆ ನೋಡಿ.

ಹಾಸನ, ಅಕ್ಟೋಬರ್ 23: ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದಲ್ಲಿ ಭಕ್ತರ ದರ್ಶನ ಇಂದು ಕೊನೆಯಾಗುತ್ತಿದ್ದು, ಗರ್ಭಗುಡಿ ಬಾಗಿಲು ಬಂದ್ ಮಾಡಲಾಗುತ್ತಿದೆ. ಮತ್ತೆ ಮುಂದಿನ ವರ್ಷ ಬಾಗಿಲು ಭಕ್ತರ ದರ್ಶನಕ್ಕೆ ತೆರೆಯಲಾಗುತ್ತದೆ. ಗರ್ಭಗುಡಿ ಬಾಗಿಲು ಬಂದ್ ಮಾಡುವುದಕ್ಕೂ ಮುನ್ನ ಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡೋತ್ಸವ ಸಂಭ್ರಮದಿಂದ ಜರುಗಿತು. ಈ ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಲತಾ ಕುಮಾರಿ ಸಹ ಕೆಂಡ ಹಾಯ್ದು ಭಕ್ತಿ ಭಾವ ಮೆರೆದರು. ಕಳಶ ಹೊತ್ತ ಭಕ್ತರು ಕೆಂಡ ಹಾಯ್ದಿದ್ದು ನೋಡಿ ನನಗೂ ಕೆಂಡ ಹಾಯುವ ಇಂಗಿತ ಬಂತು. ನಾನೆಂದೂ ಕೆಂಡ ಹಾಯ್ದಿರಲಿಲ್ಲ. ಮೊದಲಿಗೆ ಭಯ ಇತ್ತು. ಆದರೆ ದೇವರ ಮೇಲಿನ ಭಕ್ತಿಯಿಂದ ಕೈ ಮುಗಿದು ಹೋದೆ. ಏನೂ ಆಗಲಿಲ್ಲ ಎಂದು ಅವರು ನಂತರ ಅನುಭವ ಹಂಚಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us