ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್!

Edited By:

Updated on: Mar 05, 2026 | 11:42 AM

ಹಾಸನ ಮಹಾನಗರಪಾಲಿಕೆಯ ಇಂಜಿನಿಯರ್ ಸತ್ಯನಾರಾಯಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಳಗ್ಗೆ 5:30ಕ್ಕೆ ದಾಳಿ ನಡೆಸಿದ ಅಧಿಕಾರಿಗಳಿಗೆ ಬಾಗಿಲು ತೆರೆಯಲು ಸತ್ಯನಾರಾಯಣ್ 4 ಗಂಟೆಗಳ ಕಾಲ ವಿಳಂಬ ಮಾಡಿದ್ದಾರೆ. ಪೊಲೀಸರ ನೆರವಿನೊಂದಿಗೆ ಅಧಿಕಾರಿಗಳು ಅಂತಿಮವಾಗಿ ಮನೆ ಪ್ರವೇಶಿಸಿ ಪರಿಶೀಲನೆ ಆರಂಭಿಸಿದ್ದಾರೆ.

ಹಾಸನ, ಮಾರ್ಚ್​​ 05: ಮನೆ ಮೇಲೆ ದಾಳಿ ನಡೆಸಲು ಬಂದಿದ್ದ ಲೋಕಾಯುಕ್ತ ಸಿಬ್ಬಂದಿಯನ್ನೇ ಅಧಿಕಾರಿಯೋರ್ವ ನಾಲ್ಕು ಗಂಟೆ ಕಾಯಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಹಾನಗರಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ರಕ್ಷಣಾಪುರಂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಬೆಳಗ್ಗೆ 5:30ಕ್ಕೆ ಲೋಕಾಯುಕ್ತ ತಂಡ ಆಗಮಿಸಿತ್ತು. ಆದರೆ ಸತ್ಯನಾರಾಯಣ್ ಅವರು ಬಾಗಿಲು ತೆರೆಯಲು ನಿರಾಕರಿಸಿದ್ದರಿಂದ ಸುಮಾರು ಗಂಟೆಗಳ ಕಾಲ ಹೈಡ್ರಾಮಾ ನಡೆದಿದೆ.  ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ತಂಡ ಮನೆ ಮುಂದೆ ಕಾದು ಕುಳಿತಿದ್ದು, ಅಧಿಕಾರಿಗಳು ನಿರಂತರವಾಗಿ ಮನವಿ ಮಾಡಿದರೂ ಸತ್ಯನಾರಾಯಣ ಮನೆ ಬಾಗಿಲು ತೆರೆಯಲಿಲ್ಲ. ಅಧಿಕಾರಿಗಳನ್ನು ದೀರ್ಘ ಕಾಲ ಕಾಯಿಸಿದ ಬಳಿಕ ಅಂತಿಮವಾಗಿ ಮನೆಯ ಡೋರ್​​ ಓಪನ್​​ ಮಾಡಲಾಗಿದ್ದು, ಮನೆಯೊಳಗೆ ಎಂಟ್ರೀ ಕೊಟ್ಟಿರುವ ಲೋಕಾಯುಕ್ತ ಟೀಂ ಆಸ್ತಿ ದಾಖಲೆಗಳು, ಆದಾಯ ಮತ್ತು ಸಂಪಾದಿಸಿದ ಆಸ್ತಿಗಳ ಪರಿಶೀಲನೆ ನಡೆಸುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us