AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ; ಕಾವಾಡಿಗನ ಮೇಲೆ ದಾಳಿ ಮಾಡಿದ ಸಾಕಾನೆ 'ಸುಗ್ರೀವ'!

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ; ಕಾವಾಡಿಗನ ಮೇಲೆ ದಾಳಿ ಮಾಡಿದ ಸಾಕಾನೆ ‘ಸುಗ್ರೀವ’!

ಮಂಜುನಾಥ ಕೆಬಿ
| Edited By: |

Updated on: Apr 16, 2026 | 11:05 AM

Share

ಹಾಸನದ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಭೀಕರ ದುರಂತ ಸಂಭವಿಸಿದೆ. 'ಸುಗ್ರೀವ' ಎಂಬ ಸಾಕಾನೆ ತನ್ನದೇ ಕಾವಾಡಿಗ ರಾಜು ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ರಾಜು ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಕಡೆ ನರಹಂತಕ ಕಾಡಾನೆ ತಪ್ಪಿಸಿಕೊಂಡಿದ್ದರೆ, ಇನ್ನೊಂದೆಡೆ ಪಳಗಿದ ಆನೆಯಿಂದ ಈ ದಾಳಿ ನಡೆದಿರುವುದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರಲ್ಲಿ ತೀವ್ರ ಭೀತಿ ಸೃಷ್ಟಿಸಿದೆ.

ಹಾಸನ, ಏ.16: ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಕಾರ್ಯಾಚರಣೆಗೆಂದು ಕರೆತರಲಾಗಿದ್ದ ಸಾಕಾನೆ ‘ಸುಗ್ರೀವ’, ತನ್ನದೇ ಕಾವಾಡಿಗನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇಂದು (ಏಪ್ರಿಲ್ 16, 2026) ಬೆಳಿಗ್ಗೆ ಬಿಕ್ಕೋಡು ಗ್ರಾಮದ ತಾತ್ಕಾಲಿಕ ಆನೆ ಶಿಬಿರದಲ್ಲಿ ಆನೆಗಳಿಗೆ ಆಹಾರ ನೀಡುವ ವೇಳೆ ಈ ಘಟನೆ ನಡೆದಿದೆ. ಕಾವಾಡಿಗ ರಾಜು ಅವರು ಸುಗ್ರೀವನಿಗೆ ಆಹಾರ ನೀಡಲು ಹೋದಾಗ, ಆನೆಯು ದಿಢೀರನೆ ಆಕ್ರೋಶಗೊಂಡು ತನ್ನ ದಂತದಿಂದ ರಾಜು ಅವರಿಗೆ ಇರಿದಿದೆ. ಈ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ‘ನರಹಂತಕ ಒಂಟಿಕೋರೆ’ ಕಾಡಾನೆಯನ್ನು ಸೆರೆಹಿಡಿಯಲು ಸುಗ್ರೀವ ಸೇರಿದಂತೆ ಹಲವು ಸಾಕಾನೆಗಳನ್ನು ಕರೆತರಲಾಗಿತ್ತು. ನಿನ್ನೆ ಈ ಕಾಡಾನೆಯನ್ನು ಸೆರೆಹಿಡಿಯಲಾಗಿತ್ತಾದರೂ, ಅದು ಮತ್ತೆ ತಪ್ಪಿಸಿಕೊಂಡು ಹೋಗಿತ್ತು. ಇಂದು ಪುನಃ ಕಾರ್ಯಾಚರಣೆಗೆ ಸಿದ್ಧತೆ ನಡೆಸುತ್ತಿದ್ದಾಗ ಈ ಅನಾಹುತ ಸಂಭವಿಸಿದೆ. ಆನೆ ದಾಳಿಯಿಂದ ರಾಜು ಅವರಿಗೆ ತೀವ್ರವಾದ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹಾಸನದ ಹಿಮ್ಸ್ (HIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.ಒಂದೆಡೆ ನರಹಂತಕ ಕಾಡಾನೆ ತಪ್ಪಿಸಿಕೊಂಡು ಆತಂಕ ಮೂಡಿಸಿದ್ದರೆ, ಮತ್ತೊಂದೆಡೆ ಪಳಗಿಸಿದ ಸಾಕಾನೆಯೇ ಮಾವುತರು/ಕಾವಾಡಿಗರ ಮೇಲೆ ತಿರುಗಿಬಿದ್ದಿರುವುದು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us