ರಾಮನಗರದ ಜನರನ್ನು ಹಾಸನದ ನಾಯಕರು ಗುಲಾಮರಂತೆ ಟ್ರೀಟ್ ಮಾಡುತ್ತಿದ್ದಾರೆ: ಹೆಚ್ ಸಿ ಬಾಲಕೃಷ್ಣ, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Mar 15, 2024 | 2:10 PM

ತಮ್ಮನ್ನು ಅವರು ಗುಲಾಮರಂತೆಯೇ ಟ್ರೀಟ್ ಮಾಡುತ್ತಿದ್ದಾರೆ, ಅವರು ಬಳಸುವ ಭಾಷೆ ಸುಸಂಸ್ಕೃತವಲ್ಲ ಎಂದು ಹೇಳಿದ ಬಾಲಕೃಷ್ಣ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಮನಗರದ ಜನ ಸ್ವಾಭಿಮಾನದ ಪರ ಮತ ಚಲಾಯಿಸುತ್ತಾರೋ ಅಥವಾ ಗುಲಾಮಗಿರಿಯನ್ನು ಒಪ್ಪಿಕೊಳ್ಳುತ್ತಾರೋ ಅಂತ ಕಾದು ನೋಡಬೇಕಿದೆ ಎಂದು ಹೇಳಿದರು.

ಬೆಂಗಳೂರು: ಅದೊಂದು ಕಾಲವಿತ್ತು. ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಎನ್ ಚಲುವರಾಯಸ್ವಾಮಿ, ಹೆಚ್ ಸಿ ಬಾಲಕೃಷ್ಣ (HC Balakrishna), ಬಿಜೆಡ್ ಜಮೀರ್ ಅಹ್ಮದ್ ಖಾನ್ ಮೊದಲಾದವರೆಲ್ಲ ಒಂದೇ ತಾಯಿಯ ಮಕ್ಕಳಂತಿದ್ದರು. ಈಗ ಕುಮಾರಸ್ವಾಮಿಯಿಂದ ಉಳಿದ ಮೂವರು ದೂರಾಗಿ ಕಾಂಗ್ರೆಸ್ ಸೇರಿದ್ದರೆ ಕುಮಾರಣ್ಣ ಬಿಜೆಪಿ ಜೊತೆ (alliance with BJP) ಸೇರಿ ಯೇ ದೋಸ್ತಿ ಹಮ್ ನಹೀಂ ಛೋಡೆಂಗೆ ಹಾಡು ಹೇಳುತ್ತಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಬಾಲಕೃಷ್ಣ ಹಾಸನ ನಾಯಕರು ರಾಮನಗರಕ್ಕೆ ಬಂದು ಇಲ್ಲಿಯ ಜನರ ಮೇಲೆ ಅಧಿಕಾರ ನಡೆಸುತ್ತಾ ಅವರನ್ನು ಗುಲಾಮರನ್ನಾಗಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು. ತಮ್ಮನ್ನು ಅವರು ಗುಲಾಮರಂತೆಯೇ ಟ್ರೀಟ್ ಮಾಡುತ್ತಿದ್ದಾರೆ, ಅವರು ಬಳಸುವ ಭಾಷೆ ಸುಸಂಸ್ಕೃತವಲ್ಲ ಎಂದು ಹೇಳಿದ ಬಾಲಕೃಷ್ಣ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಮನಗರದ ಜನ ಸ್ವಾಭಿಮಾನದ ಪರ ಮತ ಚಲಾಯಿಸುತ್ತಾರೋ ಅಥವಾ ಗುಲಾಮಗಿರಿಯನ್ನು ಒಪ್ಪಿಕೊಳ್ಳುತ್ತಾರೋ ಅಂತ ಕಾದು ನೋಡಬೇಕಿದೆ ಎಂದು ಹೇಳಿದರು.

ರಾಜಕೀಯ ಅಖಾಡದಲ್ಲಿರುವವರೆಲ್ಲ ರಾಜಕಾರಣ ಮಾಡಿಕೊಂಡು ಬಂದಿರುತ್ತಾರೆ, ರಾಮನಗರ ರಾಜಕೀಯದ ಬಗ್ಗೆ ಮಾತಾಡುವ ಕುಮಾರಸ್ವಾಮಿ ತಾವು ಸ್ಪರ್ಧಿಸದೆ ಸಂಬಂಧಿಕರನ್ನು ಯಾಕೆ ಕರೆತಂದಿದ್ದಾರೆ? ಜನಪ್ರಿಯ ಮುಖ್ಯಮಂತ್ರಿಯಾದವರಿಗೆ ಲೋಕಸಭಾ ಚುನಾವಣೆ ಗೆಲ್ಲುವುದು ಸಾಧ್ಯವಾಗುತ್ತಿರಲಿಲ್ಲವೇ? ಎಂದು ಬಾಲಕೃಷ್ಣ ಕುಹುಕವಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.