ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರಿಂದ ಗಲಾಟೆ!

Updated on: Feb 08, 2026 | 2:23 PM

ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರೀತಿಸಿ ವಿವಾಹವಾದ ಪತ್ನಿಗೆ ಪತಿ ಕುಟುಂಬಸ್ಥರು ಕಿರುಕುಳ ನೀಡಿದ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದೆ ಅರ್ಪಿತಾ ಹಾಗೂ ಶಶಿಕುಮಾರ್ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಡ್ರೈವಿಂಗ್ ಕೆಲಸ ಮಾಡುತ್ತಿದ್ದ ಶಶಿಕುಮಾರ್, ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯಿಂದ ದೂರವಾಗಿದ್ದಾನೆ. ಅರ್ಪಿತಾ ಉಳಿದುಕೊಳ್ಳಲು ಪತಿ ಮನೆಯ ಮೇಲಿನ ರೂಂನ್ನು ಶಶಿಕುಮಾರ್ ಪೋಷಕರು ನೀಡಿದ್ದರು. ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿ ಮಗುವನ್ನು ಸಾಕುತ್ತಿದ್ದ ಅರ್ಪಿತಾ, ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದರಿಂದ ಕೋಪಗೊಂಡ ಪತಿ ಕುಟುಂಬಸ್ಥರು ರೂಂ ಖಾಲಿ ಮಾಡುವಂತೆ ಕಿರುಕುಳ ನೀಡಿ, ರೂಂಗೆ ನುಗ್ಗಿ ಶೀಟ್‌ಗಳನ್ನು ಒಡೆದು, ಪಾತ್ರೆಗಳನ್ನು ಹೊರಗೆ ಎಸೆದು ಅರ್ಪಿತಾ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅರ್ಪಿತಾ ಅರಕಲಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣ ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಹಾಸನ, ಫೆಬ್ರುವರಿ 08: ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರೀತಿಸಿ ವಿವಾಹವಾದ ಪತ್ನಿಗೆ ಪತಿ ಕುಟುಂಬಸ್ಥರು ಕಿರುಕುಳ ನೀಡಿದ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದೆ ಅರ್ಪಿತಾ ಹಾಗೂ ಶಶಿಕುಮಾರ್ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಡ್ರೈವಿಂಗ್ ಕೆಲಸ ಮಾಡುತ್ತಿದ್ದ ಶಶಿಕುಮಾರ್, ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯಿಂದ ದೂರವಾಗಿದ್ದಾನೆ. ಅರ್ಪಿತಾ ಉಳಿದುಕೊಳ್ಳಲು ಪತಿ ಮನೆಯ ಮೇಲಿನ ರೂಂನ್ನು ಶಶಿಕುಮಾರ್ ಪೋಷಕರು ನೀಡಿದ್ದರು. ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿ ಮಗುವನ್ನು ಸಾಕುತ್ತಿದ್ದ ಅರ್ಪಿತಾ, ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದರಿಂದ ಕೋಪಗೊಂಡ ಪತಿ ಕುಟುಂಬಸ್ಥರು ರೂಂ ಖಾಲಿ ಮಾಡುವಂತೆ ಕಿರುಕುಳ ನೀಡಿ, ರೂಂಗೆ ನುಗ್ಗಿ ಶೀಟ್‌ಗಳನ್ನು ಒಡೆದು, ಪಾತ್ರೆಗಳನ್ನು ಹೊರಗೆ ಎಸೆದು ಅರ್ಪಿತಾ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಅರ್ಪಿತಾ ಅರಕಲಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಕರಣ ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More