Hassan: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ತೊಂದರೆಗೀಡಾದವರಿಗೆ ಸಾಂತ್ವನ ಹೇಳಿದ ಶಾಸಕ ಸ್ವರೂಪ್ ಪ್ರಕಾಶ್

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2023 | 5:23 PM

ಪ್ರಬಲ ಎದುರಾಳಿ ಪ್ರೀತಂ ಗೌಡರನ್ನುಸೋಲಿಸಿ ಅಸೆಂಬ್ಲಿಗೆ ಆಯ್ಕೆಯಾಗಿರುವ ಸ್ವರೂಪ್ ಹೀಗೆ ಜನರ ಕಷ್ಟಗಳಿಗೆ ಸ್ಪಂದಿಸಿದರೆ ಉತ್ತಮ ನಾಯಕನಾಗಿ ಗುರುತಿಸಿಕೊಳ್ಳುತ್ತಾರೆ.

ಹಾಸನ: ಕ್ಷೇತ್ರದ ಹೊಸ ಶಾಸಕ ಜೆಡಿಎಸ್ ಪಕ್ಷದ ಸ್ವರೂಪ್ ಪ್ರಕಾಶ್ (Swaroop Prakash) ಕೆಲಸ ಶುರುವಿಟ್ಟುಕೊಂಡಿದ್ದಾರೆ. ನಗರದ ಹೊರವಲಯದ ದೇವೇಗೌಡ ನಗರ, ಕೃಷ್ಣಾನಗರ ಏರಿಯಾಳಲ್ಲಿ ಭಾರಿ ಮಳೆಯಿಂದಾಗಿ ಹಲವು ಮನೆಗಳು ಕುಸಿದ್ದಿದ್ದರೆ ಕೆಲ ಮನೆಗಳ ಛಾವಣಿಗಳು ಹಾರಿ ಹೋಗಿವೆ. ಸ್ವರೂಪ್, ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ ನಡೆಸಿ ತೊಂದರೆಗೊಳಗಾದವರ ಸಮ್ಮುಖದಲ್ಲೇ ಎಷ್ಟೆಷ್ಟು ಪರಿಹಾರ (compensation) ಸಿಗಬಹುದೆಂದು ಕೇಳಿದರು. ಮನೆ ಕಳೆದುಕೊಂಡವರಿಗೆ ಸಾಂತ್ವನ ಹೇಳುವ ಕೆಲಸವನ್ನು ಸಹ ಶಾಸಕರು ಮಾಡಿದರು. ಭವಾನಿ ರೇವಣ್ಣ (Bhavani Revanna) ಅವರ ನೆರವಿನಿಂದ ಪ್ರಬಲ ಎದುರಾಳಿ ಪ್ರೀತಂ ಗೌಡರನ್ನು (Preetham Gowda) ಸೋಲಿಸಿ ಅಸೆಂಬ್ಲಿಗೆ ಆಯ್ಕೆಯಾಗಿರುವ ಸ್ವರೂಪ್ ಹೀಗೆ ಜನರ ಕಷ್ಟಗಳಿಗೆ ಸ್ಪಂದಿಸಿದರೆ ಉತ್ತಮ ನಾಯಕನಾಗಿ ಗುರುತಿಸಿಕೊಳ್ಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.